ಉಡುಪಿ: ಪರೇಶ್ ಮೇಸ್ತನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ. ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕ ಸಾವು ಎಂಬುದಾಗಿ ಸಿಬಿಐ ಸಲ್ಲಿಸಿದ ವರದಿ ವಿಚಾರವಾಗಿ ಉಡುಪಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ಸಹಜ ಸಾವು ಅನ್ನೋದು ತಪ್ಪು. ಈ ಪ್ರಕ್ರಿಯೆಯಲ್ಲಿ ಅನ್ಯಾಯವಾಗಿದೆ. ನಾನು ಇದನ್ನು ಧಿಕ್ಕರಿಸುತ್ತೇನೆ, ವಿರೋಧಿಸುತ್ತೇನ. ಇದು ಅತ್ಯಂತ ಮೋಸ ಮಾಡಿದ ವರದಿಯಾಗಿದ್ದು, ಪರೇಶ್ ಮೇಸ್ತಾನನ್ನು ನೂರಕ್ಕೆ ನೂರು ಕೊಲೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಎಲ್ಲಾ ಸಾಕ್ಷಗಳನ್ನು ನಾಶ ಮಾಡಿದೆ ಎಂದು ಆಪಾದಿಸಿದರು.
ಪರೇಶ್ ಮೇಸ್ತ ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು : ಸಿಬಿಐ – Vishwanews24
ತಪ್ಪತಸ್ಥರು ಮುಸ್ಲಿಂ ಗೂಂಡಾ ಕಿಡಿಗೇಡಿಗಳು. ಈ ವರದಿಯಿಂದ ಹಿಂದೂ ಸಮಾಜಕ್ಕೆ, ಆತನ ಕುಟುಂಬಕ್ಕೆ ತೀರಾ ಅನ್ಯಾಯವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
2017ರಲ್ಲಿ ಪರೇಶ್ ಮೆಸ್ತ ಹತ್ಯೆಯಾಯಿತು. ಇಡೀ ರಾಜ್ಯಾದ್ಯಂತ ಹಿಂದುಗಳ ಆಕ್ರೋಶ ಪ್ರತಿಭಟನೆ ನಡೆಯಿತು. ಗೃಹ ಸಚಿವ ಅಮಿತ್ ಶಾ ಕೂಡ ಅವರ ಮನೆಗೆ ಭೇಟಿ ಕೊಟ್ಟರು. ಆ ಪ್ರಕರಣ ನಡೆದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಪ್ರಕರಣವನ್ನು 2019ರಲ್ಲಿ ಸಿಬಿಐಗೆ ಒಪ್ಪಿಸಲಾಯಿತು. ಮೂರು ವರ್ಷದ ನಂತರ ಸಿಬಿಐ ಬಿ ರಿಪೋರ್ಟ್ ಹಾಕಿದೆ. ಆದರೆ ಈ ರಿಪೋರ್ಟ್ ಮೋಸದಿಂದ ಕೂಡಿದ್ದು, ಈಗಿನ ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು. ಸಂಪೂರ್ಣವಾಗಿ ತನಿಖೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಶ್ರೀರಾಮ ಸೇನೆ ಹೋರಾಟ ಮಾಡುತ್ತದೆ ಎಂದವರು ಇದೇ ವೇಳೆ ತಿಳಿಸಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…