ಉಡುಪಿ: ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಲ್ಲಿ ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಪರ್ಕಳದ ನಿವಾಸಿ ಕೆ.ಆರ್. ಅಶೋಕ್ ಅವರು ತಮ್ಮ ನಿವಾಸದ ಬಳಿ ಪ್ರತಿದಿನ ಬೀಡಾಡಿ ಗೋವುಗಳಿಗೆ ಉಚಿತವಾಗಿ ಆಹಾರ ನೀಡುತ್ತಿದ್ದಾರೆ.
ನಿತ್ಯ ಬರುವ ಗೋವುಗಳ ಪೈಕಿ ಒಂದಕ್ಕೆ ಚರ್ಮ ಗಂಟು ರೋಗದ ಲಕ್ಷಣಗಳು ಕಂಡುಬಂದಿದ್ದು, ದೇಹದ ಮೇಲಿನ ಗಾಯಗಳು ಉಲ್ಬಣಗೊಂಡಿರುವುದು ಗಮನಕ್ಕೆ ಬಂದಿದೆ.
ಗೋವಿನ ಸ್ಥಿತಿ ಕಂಡು ಕೆ.ಆರ್. ಅಶೋಕ್ ಅವರು ಸ್ವತಃ ಆರೈಕೆ ಮಾಡುತ್ತಿದ್ದು, ಗಾಯಗಳಿಗೆ ಅರಿಶಿನ ಹಚ್ಚಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡುತ್ತಿದ್ದಾರೆ.
ಆದರೆ ಸಂಬಂಧಪಟ್ಟ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಔಷಧೋಪಚಾರ ಹಾಗೂ ಚಿಕಿತ್ಸೆ ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೆಬೆಟ್ಟು ಮಾತನಾಡಿ, ಸೋಂಕು ಇತರ ಗೋವುಗಳಿಗೆ ಹರಡದಂತೆ ಜಿಲ್ಲಾಡಳಿತ ಮತ್ತು ಪಶು ಸಂಗೋಪನಾ ಇಲಾಖೆ ತಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…
ಗೃಹಲಕ್ಷ್ಮಿ ಪರಿಷ್ಕರಣೆ : ಬಯೋಮೆಟ್ರಿಕ್, ಮುಖಚಹರೆ ಗುರುತು ಕಡ್ಡಾಯ 20 ಕೋಟಿ ರೂ. ವೆಚ್ಚದಲ್ಲಿ ಫಲಾನುಭವಿಗಳ ಮರು ಪರಿಶೀಲನೆ :…
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…