Featured

ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ – Vishwanews24

ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ

ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.

ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಕಾಮಗಾರಿ ನಡೆಯುತ್ತಿರುವಾಗ ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.

ಈ ಹಿಂದೆ ಪರ್ಕಳ ಕೆಳಗಿನ ಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಪರ್ಕಳ ನಗರ ಸಭಾ ಸದಸ್ಯ ರಾಮದಾಸ್ ನಾಯ್ಕ್ ಅವರು ಪ್ರಶ್ನೆ ಎತ್ತಿದಾಗ ಐಕೆರೆಯಲ್ಲಿ ಜೆಸಿಬಿ ಮೂಲಕ ಸುಮಾರು 15 ದಿನಗಳ ಕಾಲ ಮಣ್ಣು ತೆರವು ಮಾಡಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.

ಐಕೆರೆಯಲ್ಲಿ ಕೆರೆಯ ಅಭಿವೃದ್ಧಿಯನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಂಡ ನಂತರ ದೇವಾಲಯದ ಅವಶೇಷಗಳು ಪತ್ತೆಯಾಗಿರುವುದು ವಿಶೇಷ. ಸ್ಥಳೀಯ ನಿವಾಸಿ ಉಷಾ ನಾಯಕ್ ಅವರ ಮಾಹಿತಿ ಮೇರೆಗೆ ಸಮಾಜ ಸೇವಕ ಗಣೇಶ್ ರಾಜ್ ಸರಳಬೆಟ್ಟು ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು ಮತ್ತಿತರರು ಇದ್ದರು.

Vishwa News 24

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

14 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

19 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

26 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

54 minutes ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago

ಅ.4ರಿಂದ ಬೆಂಗಳೂರು – ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು – vishwanews24

ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…

1 hour ago