ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಕಾಮಗಾರಿ ನಡೆಯುತ್ತಿರುವಾಗ ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಈ ಹಿಂದೆ ಪರ್ಕಳ ಕೆಳಗಿನ ಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಪರ್ಕಳ ನಗರ ಸಭಾ ಸದಸ್ಯ ರಾಮದಾಸ್ ನಾಯ್ಕ್ ಅವರು ಪ್ರಶ್ನೆ ಎತ್ತಿದಾಗ ಐಕೆರೆಯಲ್ಲಿ ಜೆಸಿಬಿ ಮೂಲಕ ಸುಮಾರು 15 ದಿನಗಳ ಕಾಲ ಮಣ್ಣು ತೆರವು ಮಾಡಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಐಕೆರೆಯಲ್ಲಿ ಕೆರೆಯ ಅಭಿವೃದ್ಧಿಯನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಂಡ ನಂತರ ದೇವಾಲಯದ ಅವಶೇಷಗಳು ಪತ್ತೆಯಾಗಿರುವುದು ವಿಶೇಷ. ಸ್ಥಳೀಯ ನಿವಾಸಿ ಉಷಾ ನಾಯಕ್ ಅವರ ಮಾಹಿತಿ ಮೇರೆಗೆ ಸಮಾಜ ಸೇವಕ ಗಣೇಶ್ ರಾಜ್ ಸರಳಬೆಟ್ಟು ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು ಮತ್ತಿತರರು ಇದ್ದರು.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…