ಉಡುಪಿ: ಜಿಲ್ಲೆಯ ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಕಾಮಗಾರಿ ನಡೆಯುತ್ತಿರುವಾಗ ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.
ಈ ಹಿಂದೆ ಪರ್ಕಳ ಕೆಳಗಿನ ಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಪರ್ಕಳ ನಗರ ಸಭಾ ಸದಸ್ಯ ರಾಮದಾಸ್ ನಾಯ್ಕ್ ಅವರು ಪ್ರಶ್ನೆ ಎತ್ತಿದಾಗ ಐಕೆರೆಯಲ್ಲಿ ಜೆಸಿಬಿ ಮೂಲಕ ಸುಮಾರು 15 ದಿನಗಳ ಕಾಲ ಮಣ್ಣು ತೆರವು ಮಾಡಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.
ಐಕೆರೆಯಲ್ಲಿ ಕೆರೆಯ ಅಭಿವೃದ್ಧಿಯನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಂಡ ನಂತರ ದೇವಾಲಯದ ಅವಶೇಷಗಳು ಪತ್ತೆಯಾಗಿರುವುದು ವಿಶೇಷ. ಸ್ಥಳೀಯ ನಿವಾಸಿ ಉಷಾ ನಾಯಕ್ ಅವರ ಮಾಹಿತಿ ಮೇರೆಗೆ ಸಮಾಜ ಸೇವಕ ಗಣೇಶ್ ರಾಜ್ ಸರಳಬೆಟ್ಟು ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು ಮತ್ತಿತರರು ಇದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…