Featured

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ  (Vishwanews24): ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 169ಎ ನಲ್ಲಿನ ಪರ್ಕಳ ಪೇಟವ್ಯಾಪ್ತಿಯ ರಸ್ತೆ ಅಗಲೀಕರಣ ಕಾರ್ಯವು ಏಪ್ರಿಲ್ 11 ರಿಂದ ಆರಂಭಗೊಳ್ಳಲಿದ್ದು, ಕಾಮಗಾರಿಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ 72 ಮಂದಿ ಭೂ ಮಾಲೀಕರಿಗೆ ರೂ.21.84 ಕೋಟಿ ರೂ ಭೂ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಬುಧವಾರ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ನಡೆದ, ಪರ್ಕಳ ಪ್ರದೇಶದ ಭೂ ಸಂತ್ರಸ್ಥರ ಸಭೆಯಲ್ಲಿ ಮಾತನಾಡಿದರು.

ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತಿದ್ದು ಇಲ್ಲಿ ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಈಗಾಗಲೇ ರಸ್ತೆ ಅಗಲೀಕರಣಕ್ಕೆ 3ಜಿ ಪ್ರಕಟವಾಗಿದ್ದು, ಏಪ್ರಿಲ್ 11 ರಿಂದ ಕಾಮಗಾರಿ ಆರಂಭಿಸಲಾಗುವುದು ಆದ್ದರಿಂದ ರಸ್ತೆ ಅಗಲೀಕರಣದಿಂದ ತಮ್ಮ ಕಟ್ಟಡ ಸಾಮಗ್ರಿಗಳು , ಮರಮುಟ್ಟು ಗಳಿಗೆ ಹಾನಿಯಾಗುವವರು ಕೂಡಲೇ ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವ0ತೆ ತಿಳಿಸಿದ ಜಿಲ್ಲಾಧಿಕಾರಿಗಳು , ಅವಶ್ಯವಿದ್ದಲ್ಲಿ ಈ ಕಾರ್ಯಕ್ಕೆ ಅಗತ್ಯ ನೆರವು ಒದಗಿಸಲಾಗುವುದು ಎಂದು ಡಿಸಿ ಹೇಳಿದರು.

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24

ಭೂ ಪರಿಹಾರಕ್ಕಾಗಿ ನೋಟೀಸ್ ನೀಡಿದ 30 ದಿನದಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಪರಿಹಾರ ಪಡೆಯಬಹುದು, ಪರಿಹಾರ ಪಡೆದ ನಂತರ ಪರಿಹಾರದ ಮೊತ್ತ ಕಡಿಮೆ ಎನಿಸಿದ್ದಲ್ಲಿ 45 ದಿನಗಳ ಒಳಗೆ ಆರ್ಬಿಟರ್ ಮೂಲಕ ಮನವಿ ಸಲ್ಲಿಸಬಹುದಾಗಿದ್ದು , ಈ ಮನವಿಯು ನ್ಯಾಯುಯುತವಾಗಿದ್ದರೆ, ಹೆಚ್ಚಿನ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕರಿ ಜಿ.ಜಗದೀಶ್ ತಿಳಿಸಿದರು.

ಶಾಸಕ ರಘುಪತಿಭಟ್ ಮಾತನಾಡಿ, ಭೂಮಿ ಕೆಳದುಕೊಳ್ಳುವ ನಾಗರೀಕರಿಗೆ ಗರಿಷ್ಠ ಮೊತ್ತದ ಪರಿಹರ ನೀಡುತ್ತಿದ್ದು, ಜಿಲ್ಲೆಯ ಅಭಿವೃಧ್ದಿಯ ದೃಷ್ಠಿಯಿಯೀ ರಸ್ತೆ ಕಾಮಗಾರಿ ಅತ್ಯಂತ ಅವಶ್ಯಕವಾಗಿದ್ದು, ನಾಗರೀಕರು ಸಹಕರಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ ನಾಯಕ್ ಭೂ ಮಾಲಕರಿಗೆ ನೀಡಲಾಗುವ ಪರಿಹಾರದ ಕುರಿತು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಪೌರಾಯುಕ್ತ ಉದಯ ಶೆಟ್ಟಿ, ಸಹಾಯಕ ಇಂಜಿನಿಯರ್ ಮಂಜುನಾಥ ನಾಯಕ್
ಹಾಗೂ ಭೂ ಮಾಲಕರು ಉಪಸ್ಥಿತರಿದ್ದರು.

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

4 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago