Featured

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ : ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಏ.11 ರಿಂದ ಆರಂಭ: ಡಿಸಿ ಜಿ.ಜಗದೀಶ್  -Vishwanews24

ಉಡುಪಿ  (Vishwanews24): ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 169ಎ ನಲ್ಲಿನ ಪರ್ಕಳ ಪೇಟವ್ಯಾಪ್ತಿಯ ರಸ್ತೆ ಅಗಲೀಕರಣ ಕಾರ್ಯವು ಏಪ್ರಿಲ್ 11 ರಿಂದ ಆರಂಭಗೊಳ್ಳಲಿದ್ದು, ಕಾಮಗಾರಿಗಾಗಿ ಭೂ ಸ್ವಾಧೀನಪಡಿಸಿಕೊಳ್ಳುವ 72 ಮಂದಿ ಭೂ ಮಾಲೀಕರಿಗೆ ರೂ.21.84 ಕೋಟಿ ರೂ ಭೂ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಬುಧವಾರ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ನಡೆದ, ಪರ್ಕಳ ಪ್ರದೇಶದ ಭೂ ಸಂತ್ರಸ್ಥರ ಸಭೆಯಲ್ಲಿ ಮಾತನಾಡಿದರು.

ಪರ್ಕಳ ಪಟ್ಟಣ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತಿದ್ದು ಇಲ್ಲಿ ರಸ್ತೆ ಅಗಲೀಕರಣ ಅತ್ಯಂತ ಅವಶ್ಯಕವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಿಂದ ಈಗಾಗಲೇ ರಸ್ತೆ ಅಗಲೀಕರಣಕ್ಕೆ 3ಜಿ ಪ್ರಕಟವಾಗಿದ್ದು, ಏಪ್ರಿಲ್ 11 ರಿಂದ ಕಾಮಗಾರಿ ಆರಂಭಿಸಲಾಗುವುದು ಆದ್ದರಿಂದ ರಸ್ತೆ ಅಗಲೀಕರಣದಿಂದ ತಮ್ಮ ಕಟ್ಟಡ ಸಾಮಗ್ರಿಗಳು , ಮರಮುಟ್ಟು ಗಳಿಗೆ ಹಾನಿಯಾಗುವವರು ಕೂಡಲೇ ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿಕೊಳ್ಳುವ0ತೆ ತಿಳಿಸಿದ ಜಿಲ್ಲಾಧಿಕಾರಿಗಳು , ಅವಶ್ಯವಿದ್ದಲ್ಲಿ ಈ ಕಾರ್ಯಕ್ಕೆ ಅಗತ್ಯ ನೆರವು ಒದಗಿಸಲಾಗುವುದು ಎಂದು ಡಿಸಿ ಹೇಳಿದರು.

ಉಡುಪಿ : ಏ.12 ರಂದು ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ -Vishwanews24

ಭೂ ಪರಿಹಾರಕ್ಕಾಗಿ ನೋಟೀಸ್ ನೀಡಿದ 30 ದಿನದಲ್ಲಿ ಅಗತ್ಯ ದಾಖಲಾತಿಗಳನ್ನು ನೀಡಿ ಪರಿಹಾರ ಪಡೆಯಬಹುದು, ಪರಿಹಾರ ಪಡೆದ ನಂತರ ಪರಿಹಾರದ ಮೊತ್ತ ಕಡಿಮೆ ಎನಿಸಿದ್ದಲ್ಲಿ 45 ದಿನಗಳ ಒಳಗೆ ಆರ್ಬಿಟರ್ ಮೂಲಕ ಮನವಿ ಸಲ್ಲಿಸಬಹುದಾಗಿದ್ದು , ಈ ಮನವಿಯು ನ್ಯಾಯುಯುತವಾಗಿದ್ದರೆ, ಹೆಚ್ಚಿನ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕರಿ ಜಿ.ಜಗದೀಶ್ ತಿಳಿಸಿದರು.

ಶಾಸಕ ರಘುಪತಿಭಟ್ ಮಾತನಾಡಿ, ಭೂಮಿ ಕೆಳದುಕೊಳ್ಳುವ ನಾಗರೀಕರಿಗೆ ಗರಿಷ್ಠ ಮೊತ್ತದ ಪರಿಹರ ನೀಡುತ್ತಿದ್ದು, ಜಿಲ್ಲೆಯ ಅಭಿವೃಧ್ದಿಯ ದೃಷ್ಠಿಯಿಯೀ ರಸ್ತೆ ಕಾಮಗಾರಿ ಅತ್ಯಂತ ಅವಶ್ಯಕವಾಗಿದ್ದು, ನಾಗರೀಕರು ಸಹಕರಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನಾಗರಾಜ ನಾಯಕ್ ಭೂ ಮಾಲಕರಿಗೆ ನೀಡಲಾಗುವ ಪರಿಹಾರದ ಕುರಿತು ಮಾಹಿತಿ ನೀಡಿದರು. ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಪೌರಾಯುಕ್ತ ಉದಯ ಶೆಟ್ಟಿ, ಸಹಾಯಕ ಇಂಜಿನಿಯರ್ ಮಂಜುನಾಥ ನಾಯಕ್
ಹಾಗೂ ಭೂ ಮಾಲಕರು ಉಪಸ್ಥಿತರಿದ್ದರು.

ಉಡುಪಿ : ಕೋವಿಡ್ ಸುರಕ್ಷಾ ನಿಯಮಗಳ ಪಾಲನೆ ಕಡ್ಡಾಯವಾಗಲಿ: ಡಾ. ಮಧುಸೂದನ್ ನಾಯಕ್ -Vishwanews24

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago