Featured

ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು – vishwanews24

ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ. ಆದರೆ ಇದನ್ನು ಸಹಿಸದ ಕೆಲವರು ಟೀಕೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದಾರೆ .ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು , ಪರ್ಯಾಯ ಮಹೋತ್ಸವವು ಅಷ್ಟಮಠಾಧೀಶರು ಭಾಗವಹಿಸಿದ್ದ ಪುಣ್ಯವೇದಿಕೆಯಾಗಿತ್ತು. ಕಳೆದ ಬಾರಿ ಕೂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಭಗವಾದ್ವಜದ ಮೂಲಕವೇ ಚಾಲನೆ ನೀಡಿದ್ದರು.ಈ ಬಾರಿ ಕೂಡ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಭಗವಾದ್ವಜದ ಮೂಲಕ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಅದನ್ನು ಸಹಿಸಿಕೊಳ್ಳಲಾಗುತ್ತಿಲ್ಲ. ಬಹುಶಃ ಕಾಂಗ್ರೆಸ್ಸಿಗರು ಟೀಕೆ ಮಾಡುವ ರೀತಿ ನೋಡಿದರೆ ಎಲ್ಲೋ ಪಾಕಿಸ್ತಾನದ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ರೀತಿಯಲ್ಲಿ ಟೀಕಿಸುತ್ತಿದ್ದಾರೆ ಎಂದು ಯಶ್ಪಾಲ್ ಹೇಳಿದ್ದಾರೆ.

ಕಾಂಗ್ರೆಸ್ ನವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಲಿ. ಪರ್ಯಾಯ ಮಹೋತ್ಸವಕ್ಕೆ 6 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂಬ ವಿಷಯವನ್ನು ಇಟ್ಟುಕೊಂಡು ಪ್ರಚಾರ ಮಾಡಿದ್ದಾರೆ. ಆದರೆ ಆ 6 ಕೋಟಿಯಲ್ಲಿ ಯಾವುದಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ? ಅದರಲ್ಲಿ ಯಾವ ಕಾಮಗಾರಿಗಳು ನಡೆದಿವೆ ಎಂಬ ಲೆಕ್ಕವನ್ನು ಕಾಂಗ್ರೆಸ್ ನವರು ಮೊದಲು ಕೊಡಲಿ, ಅದು ಬಿಟ್ಟು ಪರ್ಯಾಯ ಮಹೋತ್ಸವದ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಇದನ್ನು ಉಡುಪಿಯ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago