Featured

ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು – vishwanews24

ಉಡುಪಿ : ಪರ್ಯಾಯಕ್ಕೆ ಚಾಲನೆ ನೀಡಿದ್ದು ಭಗವಾದ್ವಜದ ಮೂಲಕ – ಪಾಕಿಸ್ತಾನದ ಧ್ವಜದ ಮೂಲಕ ಅಲ್ಲ : ಕಾಂಗ್ರೆಸಿಗರಿಗೆ ಯಶ್ ಪಾಲ್ ಸುವರ್ಣ ತಿರುಗೇಟು

ಉಡುಪಿ: ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ. ಆದರೆ ಇದನ್ನು ಸಹಿಸದ ಕೆಲವರು ಟೀಕೆ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ಭಗವಾದ್ವಜದ ಮೂಲಕ ಪರ್ಯಾಯಕ್ಕೆ ಚಾಲನೆ ನೀಡಿದ್ದಾರೆ .ಬಹುಶಃ ಕಾಂಗ್ರೆಸಿಗರು ಅದನ್ನು ಪಾಕಿಸ್ತಾನದ ಧ್ವಜ ಎಂಬ ರೀತಿಯಲ್ಲಿ ಟೀಕೆ ಮಾಡುತ್ತಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು , ಪರ್ಯಾಯ ಮಹೋತ್ಸವವು ಅಷ್ಟಮಠಾಧೀಶರು ಭಾಗವಹಿಸಿದ್ದ ಪುಣ್ಯವೇದಿಕೆಯಾಗಿತ್ತು. ಕಳೆದ ಬಾರಿ ಕೂಡ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಭಗವಾದ್ವಜದ ಮೂಲಕವೇ ಚಾಲನೆ ನೀಡಿದ್ದರು.ಈ ಬಾರಿ ಕೂಡ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಭಗವಾದ್ವಜದ ಮೂಲಕ ಚಾಲನೆ ನೀಡಿದ್ದಾರೆ. ಕಾಂಗ್ರೆಸ್ಸಿಗರಿಗೆ ಅದನ್ನು ಸಹಿಸಿಕೊಳ್ಳಲಾಗುತ್ತಿಲ್ಲ. ಬಹುಶಃ ಕಾಂಗ್ರೆಸ್ಸಿಗರು ಟೀಕೆ ಮಾಡುವ ರೀತಿ ನೋಡಿದರೆ ಎಲ್ಲೋ ಪಾಕಿಸ್ತಾನದ ಧ್ವಜದ ಮೂಲಕ ಚಾಲನೆ ನೀಡಿದ್ದಾರೆ ಎಂಬ ರೀತಿಯಲ್ಲಿ ಟೀಕಿಸುತ್ತಿದ್ದಾರೆ ಎಂದು ಯಶ್ಪಾಲ್ ಹೇಳಿದ್ದಾರೆ.

ಕಾಂಗ್ರೆಸ್ ನವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡಲಿ. ಪರ್ಯಾಯ ಮಹೋತ್ಸವಕ್ಕೆ 6 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂಬ ವಿಷಯವನ್ನು ಇಟ್ಟುಕೊಂಡು ಪ್ರಚಾರ ಮಾಡಿದ್ದಾರೆ. ಆದರೆ ಆ 6 ಕೋಟಿಯಲ್ಲಿ ಯಾವುದಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ? ಅದರಲ್ಲಿ ಯಾವ ಕಾಮಗಾರಿಗಳು ನಡೆದಿವೆ ಎಂಬ ಲೆಕ್ಕವನ್ನು ಕಾಂಗ್ರೆಸ್ ನವರು ಮೊದಲು ಕೊಡಲಿ, ಅದು ಬಿಟ್ಟು ಪರ್ಯಾಯ ಮಹೋತ್ಸವದ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ. ಇದನ್ನು ಉಡುಪಿಯ ಜನರು ಅರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

2 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago