Featured

ಉಡುಪಿ ಪರ್ಯಾಯಕ್ಕೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ – Vishwanews24

ಉಡುಪಿ ಪರ್ಯಾಯಕ್ಕೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ – Vishwanews24

ಉಡುಪಿ: 2022ನೇ ಜನವರಿ ತಿಂಗಳಲ್ಲಿ ಉಡುಪಿಯಲ್ಲಿ ವಿಶ್ವ ಪ್ರಸಿದ್ಧ ಉಡುಪಿ ಪರ್ಯಾಯ ಮಹೋತ್ಸವ ನಡೆಯಲಿದ್ದು, ಲಕ್ಷಾಂತರ ಮಂದಿ ಈ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ನಗರದ ರಸ್ತೆಗಳ ಅಭಿವೃದ್ಧಿ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಉಡುಪಿ ನಗರಸಭೆಗೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರುಗಳ ನಿಯೋಗದೊಂದಿಗೆ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಯಾವುದೇ ಅನುದಾನ ಬಿಡುಗಡೆ ಮಾಡುವಂತಿಲ್ಲ. ಚುನಾವಣಾ ನೀತಿ ಸಂಹಿತೆ ಮುಗಿದ ತಕ್ಷಣ ಉಡುಪಿ ನಗರದ ಅಭಿವೃದ್ಧಿಗೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ವಿಶೇಷ ಅನುದಾನ ನೀಡುವುದಾಗಿ ಭರವಸೆ ನೀಡಿದರು. ಹಾಗೂ ಪರ್ಯಾಯ ಮಹೋತ್ಸವಕ್ಕೆ ಸರ್ಕಾರದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭ ಶಾಸಕ ಕೆ ರಘುಪತಿ ಭಟ್ ಅವರು ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಅವರಿಗೆ ಉಡುಪಿ ಶ್ರೀ ಕೃಷ್ಣ ದೇವರ ಪ್ರಸಾದವನ್ನು ನೀಡಿ ಗೌರವಿಸಿದರು.

ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮಿ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago