ಉಡುಪಿ: ಶ್ರೀಕೃಷ್ಣನ ಪೂಜಾಧಿಕಾರ ಅದಮಾರು ಮಠದಿಂದ ಕೃಷ್ಣಾಪುರ ಮಠಕ್ಕೆ ಹಸ್ತಾಂತರ ಆಗಲಿದೆ. ಪರ್ಯಾಯ ಪೂರ್ವಭಾವಿಯಾಗಿ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದೆ. ಈ ನಡುವೆ ರಾಜ್ಯಕ್ಕೆ ಮಾದರಿಯಾದ ಕೆಲಸವೊಂದನ್ನು ಭಾವೀ ಕೃಷ್ಣಾಪುರ ಮಠ ಮಾಡಿದೆ.
ಐದು ಸಾವಿರ ಜನರ ಪಾದಯಾತ್ರೆ ರದ್ದು ಮಾಡಿ, 285 ವಾಹನಗಳಲ್ಲಿ ಹೊರೆಕಾಣಿಕೆ ಮೆರವಣಿಗೆ ಮಾಡಿದೆ.
ಉಡುಪಿ ನಗರದ ಜೋಡುಕಟ್ಟೆಯಿಂದ ಹೊರೆ ಕಾಣಿಕೆ ಮೆರವಣಿಗೆ ಆರಂಭವಾಗುತ್ತದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗಿಯಾಗಿ ತರಕಾರಿ ದಿನಸಿ ವಸ್ತುಗಳನ್ನು ಮಠಕ್ಕೆ ಕಾಣಿಕೆಯಾಗಿ ಕೊಡುತ್ತಾರೆ. ಈ ಬಾರಿ ಐದು ಸಾವಿರಕ್ಕಿಂತ ಹೆಚ್ಚು ಜನ ಪಾದಯಾತ್ರೆಯ ಮೂಲಕ ಹೊರೆಕಾಣಿಕೆಗಳನ್ನು ಸಲ್ಲಿಕೆ ಮಾಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ಕೊರೊನಾ ಸಾಂಕ್ರಾಮಿಕ ವಿಪರೀತವಾಗಿ ಹರಡುತ್ತಿರುವುದರಿಂದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವಾಹನಗಳ ಮೂಲಕ ಮಾತ್ರ ಹೊರಕಾಣಿಕೆ ಕೃಷ್ಣಮಠಕ್ಕೆ ತಲುಪಿಸಲಾಗಿದೆ.
ಜಗತ್ತಿಗೆ ಕೊರೊನಾ ಸಾಂಕ್ರಾಮಿಕ ಮಹಾಮಾರಿ ಅಪ್ಪಳಿಸಿದೆ. ವರ್ಷದ ಹಿಂದೆಯೇ ನಾವು ಒಂದು ನಿರ್ಧಾರವನ್ನು ಮಾಡಿದ್ದೆವು. ಪರ್ಯಾಯ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ನಿಯಮಗಳು ಹೇಗಿರುತ್ತದೆ ಅದನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಪ್ರದಾಯಕ್ಕೆ ಚ್ಯುತಿ ಬರದ ಹಾಗೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಅದರಂತೆ ಕಾರ್ಯಕ್ರಮ ಮಾಡಿಕೊಂಡು ಹೋಗುತ್ತಿದ್ದೇವೆ. ದೇವರು ಅನುಗ್ರಹಿಸಿದಂತೆ ಕಾರ್ಯಕ್ರಮಗಳು ನಡೆಯುತ್ತಿದೆ. ಅದ್ದೂರಿತನಕ್ಕೆ ಒತ್ತುಕೊಡದೆ, ಸಾಂಪ್ರದಾಯಿಕ ಪರ್ಯಾಯ ನಡೆಸುತ್ತೇವೆ ಎಂದು ಕೃಷ್ಣಾಪುರ ಮಠಾಧೀಶ ಭಾವೀ ಪರ್ಯಾಯ ಪೀಠಾಧೀಶ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಹೇಳಿದ್ದಾರೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…