ಉಡುಪಿ: ಜನವರಿಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ಉಡುಪಿ ನಗರದ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿದೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರತಿ ಬಾರಿಯ ಪರ್ಯಾಯ ಮಹೋತ್ಸವದಂತೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ ಅಭಿವೃದ್ಧಿ, ಸ್ವಚ್ಚತೆ, ಚರಂಡಿ, ದಾರಿ ದೀಪ, ಕಿನ್ನಿಮುಲ್ಕಿ ಗೋಪುರ ಹಾಗೂ ಸರಕಾರಿ ಕಟ್ಟಡಗಳಿಗೆ ಪೈಂಟಿಂಗ್, ದೀಪಾಲಂಕಾರ ಸಹಿತ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಡೆಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.
ಉಡುಪಿಯ ಪ್ರಮುಖ ರಸ್ತೆಗಳಾದ ಅಜ್ಜರಕಾಡು ವಾರ್ಡಿನ ಬ್ರಹ್ಮಗಿರಿ ಸರ್ಕಲ್ ನಿಂದ ಪುರಭವನ ರಸ್ತೆ, ಕುಂಜಿಬೆಟ್ಟು ವಾರ್ಡ್ ಕಟ್ಟೆ ಆಚಾರ್ಯ ಮಾರ್ಗ, ಕಿನ್ನಿಮುಲ್ಕಿ ವಾರ್ಡ್ ಬಿಗ್ ಬಜಾರ್ ಎದುರು ರಸ್ತೆ, ಬೈಲೂರು ವಾರ್ಡಿನ ಅಮ್ಮಣ್ಣಿ ರಮಣ ಶೆಟ್ಟಿ ಹಾಲ್ ಮುಂಭಾಗದ ರಸ್ತೆ ಅಗಲೀಕರಣ, ಬೈಲೂರು ವಾರ್ಡಿನ ಶಾರದಾಂಬ ದ್ವಾರದಿಂದ ಹಳೇ ಸ್ಟೇಟ್ ಬ್ಯಾಂಕ್ ವರೆಗೆ ರಸ್ತೆ ಅಗಲೀಕರಣ, ಬೀಡಿನಗುಡ್ಡೆ ಜಂಕ್ಷನ್ ನಿಂದ ಚಿಟ್ಪಾಡಿ ಜಂಕ್ಷನ್ ವರೆಗೆ ರಸ್ತೆ ಮರು ಡಾಮರೀಕರಣ ಹಾಗೂ ಚರಂಡಿ ರಚನೆ ಸಹಿತ ವಿವಿಧ ಬಹುದಿನಗಳ ಬೇಡಿಕೆಯ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ.
ಈಗಾಗಲೇ ರಾಜ್ಯ ಸರಕಾರದಿಂದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದು, ಕನಿಷ್ಠ 10 ಕೋಟಿ ಅನುದಾನ ಮಂಜೂರು ಮಾಡುವ ನಿರೀಕ್ಷೆಯಿದೆ ಎಂದು ಯಶ್ ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…