ಉಡುಪಿ: ಉಡುಪಿಯ ಅದಮಾರು ಶ್ರೀಗಳ ಪರ್ಯಾಯ ಮಹೋತ್ಸವ ಅದ್ದೂರಿಯಾಗಿ ನೇರವೇರಿತು. ಸರ್ವಜ್ನ ಪೀಠವನ್ನೇರುವ ಮೂಲಕ ಎರಡು ವರುಷಗಳ ಪೂಜಾ ಕೈಂಕರ್ಯವನ್ನು ಅಧಿಕಾರವನ್ನು ಅದಮಾರು ಶ್ರೀಗಳು ಪಲಿಮಾರು ಶ್ರೀಗಳಿಂದ ಪಡೆದುಕೊಂಡರು. ಅದಮಾರು ಈಶಪ್ರಿಯ ಶ್ರೀಗಳ ಪೀಠಾರೋಹಣದೊಂದಿಗೆ ಉಡುಪಿಯಲ್ಲಿ 250 ನೇ ಪರ್ಯಾಯ ಸಂಪನ್ನಗೊಂಡಿತು.
ಉಡುಪಿ ಸಹಿತ ನಾಡಿನ ಮೂಲೆಮೂಲೆಯ ಭಕ್ತರು ಪರ್ಯಾಯದ ಅದ್ದೂರಿತನ ಮತ್ತು ವೈಭವಕ್ಕೆ ಸಾಕ್ಷಿಯಾದರು. ಮುಂಜಾನೆ ಪರ್ಯಾಯದ ಮೆರವಣಿಗೆ ,ಸರ್ವಜ್ನ ಪಿಠಾರೋಹಣ -ಅಕ್ಷಯಪಾತ್ರೆ ಹಸ್ತಾಂತರ ಕಾರ್ಯಕ್ರಮಗಳೊಂದಿಗೆ ಪರ್ಯಾಯದ ಒಂದು ಹಂತ ಮುಗಿಯಿತು
ಉಡುಪಿಗೆ ಉಡುಪಿಯೇ ಎಚ್ಚರದಿಂದ ಇದ್ದು ವೈಭವದ ಪರ್ಯಾಯ ಮೆರವಣಿಗೆಯ ಸೊಬಗನ್ನು ಕಣ್ತುಂಬಿ ಕೊಂಡಿತು. ರಸ್ತೆಯ ಇಕ್ಕೆಲಗಳಲ್ಲಿ, ಬೃಹತ್ ಕಟ್ಟಡಗಳ ಮಾಳಿಗೆಗಳಲ್ಲಿ, ಕಾಂಪೌಂಡ್ ಗೋಡೆಗಳ ಮೇಲೆ ಕುಳಿತುಕೊಂಡು ಜನರು ಮೆರವಣಿಗೆ ವೀಕ್ಷಿಸಿದರು.
ಜೋಡುಕಟ್ಟೆಯಿಂದ ಹೊರಟ ಶೋಭಾಯಾತ್ರೆಯು ರಥಬೀದಿಗೆ ಸಾಗಿತು. ವಿವಿಧ ಸ್ತಬ್ಧಚಿತ್ರಗಳು, ಕಲಾ ತಂಡಗಳನ್ನು ಒಳಗೊಂಡಿದ್ದು ಸಾಂಪ್ರ ದಾಯಿಕತೆಗೆ ಆದ್ಯತೆ ನೀಡಲಾಗಿತ್ತು. ಮುಂಜಾನೆ 5.57 ರ ಸುಮಾರಿಗೆ ಪಲಿಮಾರು ಶ್ರೀಗಳಿಂದ ಅಕ್ಷಯಪಾತ್ರೆ ಪಡೆದುಕೊಳ್ಳುವುದರೊಂದಿಗೆ ಮತ್ತು ಸರ್ವಜ್ನ ಪಿಠಾರೋಹಣಗೈಯುವುದರೊಂದಿಗೆ ಅದಮಾರು ಈಶಪ್ರಿಯ ಶ್ರೀಗಳು ಪ್ರಥಮ ಬಾರಿಗೆ ಪರ್ಯಾಯ ಪೀಠ ಏರಿದಂತಾಯಿತು.
ಬೆಳಿಗ್ಗೆ 5 ಗಂಟೆ ಸಮಾರಿಗೆ ಮೆರವಣಿಗೆ ಕೃಷ್ನಮಠ ತಲುಪಿದ ಬಳಿಕ ಪರ್ಯಾಯ ಶ್ರಿಗಳಿಗೆ ಅಕ್ಷಯಪಾತ್ರೆ ಹಸ್ತಾಂತರ ವಿಧಿ ನಡೆಯಿತು ;ಪಲಿಮಾರು ಶ್ರೀಗಳು ಅಕ್ಷಯಪಾತ್ರೆ ಮತ್ತು ಸಟ್ಟುಗವನ್ನು ಅದಮಾರು ಶ್ರೀಗಳಿಗೆ ಹಸ್ತಾಂತರಿಸಿದರು.ಬಳಿಕ ಸರ್ವಜ್ನ ಪಿಠಾರೋಹಣ ವಿಧಿ ನೆರವೇರಿತು;ಪರ್ಯಾಯದ ಹಲವು ಸಾಂಪ್ರದಾಯಿಕ ವಿಧಿಗಳು ಜರುಗಿದ ಬಳಿಕ ರಜಾಂಗಣದಲ್ಲಿ ಮಧ್ಯಾಹ್ನ ಪರ್ಯಾಯ ದರ್ಬಾರ್ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ..
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…