Featured

ಉಡುಪಿ :ಪಾಕ್‌ ಆಕ್ರಮಿತ ಕಾಶ್ಮೀರವೂ ಭಾರತದ ತೆಕ್ಕೆಗೆ ಬರುವಂತಾಗಲಿ :ಪಲಿಮಾರು ಶ್ರೀ -Vishwanews24

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ಪರ್ಯಾಯ ಶ್ರೀಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥ ಕೋಟಿ ತುಳಸಿ ಅರ್ಚನೆ ಸಂಪನ್ನ ಗೊಂಡಿತು.

ಜಿಲ್ಲೆಯ 28 ವಲಯಗಳ ಬ್ರಾಹ್ಮಣ ಸಂಘಗಳ ಸುಮಾರು 2,800 ಸದಸ್ಯರು ಪಾಲ್ಗೊಂಡು ವಿಷ್ಣು ಸಹಸ್ರನಾಮ ಪಾರಾಯಣವನ್ನು ತಲಾ ನಾಲ್ಕು ಬಾರಿ ನಡೆಸಿಕೊಟ್ಟರು. ಹಾಸನ,ಬೆಂಗಳೂರು,ಪಂಢರಪುರ,ಹೊಳೆ ನರಸೀಪುರ, ಮೈಸೂರು ಮೊದಲಾದೆಡೆಗಳಿಂದ ತುಳಸಿ ದಳಗಳನ್ನು ಭಕ್ತರು ನೀಡಿದ್ದರು.

ಶ್ರೀ ಪಲಿಮಾರು ಮಠಾಧೀಶ ರಲ್ಲದೆ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಶ್ರೀ ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಶ್ರೀ ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಅರ್ಚನೆಗಳನ್ನು ನಡೆಸಿಕೊಟ್ಟರು.

ಗರ್ಭಗುಡಿಯಲ್ಲಿರುವ ವಿಗ್ರಹಕ್ಕೆ ಅರ್ಚನೆ ನಡೆದಂತೆ ರಾಜಾಂಗಣ ದಲ್ಲಿಯೂ ಶ್ರೀಕೃಷ್ಣನ ಪ್ರತಿಮೆಗೆ ಅರ್ಚನೆಗಳನ್ನು ಸ್ವಾಮೀಜಿಯವರು ನಡೆಸಿಕೊಟ್ಟರು.

ಆಶೀರ್ವಚನ ನೀಡಿದ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು, ಶಾಸ್ತ್ರದ ಸಾರ ಮಹಾಭಾರತ. ಅದರಲ್ಲಿಯೂ ಗೀತೆ ಮತ್ತು ವಿಷ್ಣು ಸಹಸ್ರನಾಮ ಮಹಾಭಾರತದ ಸಾರ ವಾಗಿದೆ. ಗೀತೆ ಕೃಷ್ಣಗೀತೆಯಾದರೆ, ವಿಷ್ಣುಸಹಸ್ರನಾಮ ಭಕ್ತ ಭೀಷ್ಮರು ದೇವರ ಅನೇಕ ನಾಮಗಳನ್ನು ಕೊಂಡಾಡಿದ ಭಕ್ತಗೀತೆ. ಇದರ ಒಂದೊಂದು ನಾಮವೂ ನೂರು ನಾಮಗಳನ್ನು ಕೊಡುತ್ತಿದೆ. ನಮಗೆ ನಾಲಗೆ ಮತ್ತು ದೇವರ ನಾಮಗಳೆರಡೂ ಇರುವಾಗ ನಾವು ಅವುಗಳನ್ನು ಉಪಯೋಗಿಸುತ್ತಿಲ್ಲ. ಇಂತಹ ಅಮೂಲ್ಯ ವಿಷ್ಣುಸಹಸ್ರನಾಮದ ಪಾರಾಯಣದಿಂದ ಜಗತ್ತಿಗೆ, ದೇಶಕ್ಕೆ ಕಲ್ಯಾಣವಾಗಲಿ ಎಂದು ಹಾರೈಸಿದರು.

ಶ್ರೀಕೃಷ್ಣ ದೇವಕಿಗೆ ಮಾತ್ರ ಆನಂದ ಕೊಟ್ಟದ್ದಲ್ಲ. ಭಕ್ತರಿಗೂ ಆನಂದ ಕೊಡುತ್ತಾನೆ. ತುಳಸಿಗೆ ಸಮನಾದ ಇನ್ನೊಂದು ವಸ್ತುವಿಲ್ಲ. ಹೀಗಾಗಿಯೇ ಏನನ್ನು ಕೊಡುವಾಗಲೂ ತುಳಸಿ ಸಹಿತ ಕೊಡುತ್ತೇವೆ. ಇದರರ್ಥ ತುಳಸಿ ಸಮೇತ ಕೊಟ್ಟಾಗ ಅದು ಭಗವಂತನಿಗೆ ತಲುಪುತ್ತದೆ. ನಾವು ಮಾಡಿದ ನಿತ್ಯದ ಲಕ್ಷ ತುಳಸಿ ಅರ್ಚನೆಯೂ ಒಂದರ್ಥದಲ್ಲಿ ಫ‌ಲ ನೀಡಿದೆ. ನಮ್ಮ ದೇಶದ ಮುಕುಟಪ್ರಾಯವಾದ ಕಾಶ್ಮೀರ ಈಗ ಮುಕ್ತಗೊಂಡರೆ, ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರವೂ ಭಾರತದ ತೆಕ್ಕೆಗೆ ಬರುವಂತಾಗಲಿ ಎಂದು ಶ್ರೀ ಪಲಿಮಾರು ಶ್ರೀಗಳು ಹಾರೈಸಿದರು.

ವಿಷ್ಣು ಸಹಸ್ರನಾಮವನ್ನು ಆರಂಭಿಸು ವಾಗ “ಓಂ ನಮೋ ಭಗವತೇ ವಾಸುದೇವಾಯ’ ಎಂದು ಹೇಳುವ ಕ್ರಮವಿದೆ. ಇದರರ್ಥ ನಮ್ಮ ನೋವನ್ನು ವಾಸಿ ಮಾಡು ಎಂಬ ಭೀಷ್ಮರ ಪ್ರಾರ್ಥನೆ. ಈ ಪ್ರಾರ್ಥನೆಯಿಂದ ನಮ್ಮ ದೇಶದ ಅನಿಷ್ಠಗಳು ನಿವಾರಣೆಯಾಗಲಿ ಎಂದು ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಆಶಿಸಿದರು. ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ ಉಪಾಧ್ಯ ಅವರು ಕಾರ್ಯಕ್ರಮ ನಿರ್ವಹಿಸಿದರು.

 ತುಳಸಿಯಲ್ಲಿ ಲಕ್ಷ್ಮೀ ಸನ್ನಿಧಾನವಿದೆ. ದೇಶದಲ್ಲಿ ಸುಭದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು, ಕಾಶ್ಮೀರ ಸಮಸ್ಯೆ ನಿವಾರಣೆಯಾಗಲು ಕೃಷ್ಣನಿಗೆ ನಿತ್ಯ ಲಕ್ಷ ತುಳಸಿ ಅರ್ಚನೆ ನೆರವೇರಿಸಿದ್ದೂ ಕಾರಣ ಎಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಆಶಿಸಿದರು.

ಪರ್ಯಾಯ ಪಲಿಮಾರು ಮಠ ಮತ್ತು ಜಿಲ್ಲಾ ಬ್ರಾಹ್ಮಣ ಮಹಾಸಭಾ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಕೃಷ್ಣ ಮಠ, ರಾಜಾಂಗಣದಲ್ಲಿ ನಡೆದ ಕೋಟಿ ತುಳಸಿ ಅರ್ಚನೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ದೇವರು ದೇಶಕ್ಕೆ ‘ತಲೆ’ ನೀಡಿದ್ದಾನೆ. ಪಿಒಕೆಯೂ ಆದಷ್ಟು ಬೇಗ ಭಾರತದೊಂದಿಗೆ ವಿಲೀನವಾಗಲಿ. ಲಕ್ಷ್ಮಿಯ ಮೂಲಕ ಯಾವುದೇ ವಸ್ತುವನ್ನು ನೀಡಿದರೂ ದೇವರು ಬೇಗ ಸ್ವೀಕಾರ ಮಾಡುತ್ತಾನೆ. ಹೀಗಾಗಿ ದಾನ ಮಾಡುವಾಗ ತುಳಸಿ ದಳವನ್ನೂ ಜತೆಯಲ್ಲಿ ಇರಿಸುತ್ತೇವೆ ಎಂದರು.

ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.
ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಭಾಗವಹಿಸಿದ್ದರು.
೨.೫ ಸಾವಿರ ಮಂದಿ ೪ ಬಾರಿ ವಿಷ್ಣುಸಹಸ್ರನಾಮ ಹೇಳಿದರು. ೧ ಕೋಟಿ ತುಳಸಿ ಅರ್ಚನೆ ಮಾಡಲಾಯಿತು. ಕೃಷ್ಣ ದೇವರಿಗೆ ಮತ್ತು ರಾಜಾಂಗಣದಲ್ಲಿ ಕೃಷ್ಣ ಪ್ರತಿಮೆಗೆ ಏಕಕಾಲದಲ್ಲಿ ಅರ್ಚನೆ ಮಾಡಲಾಯಿತು. ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಂ. ಮಂಜುನಾಥ ಉಪಾಧ್ಯ, ಜೊತೆ ಕಾರ್ಯದರ್ಶಿ ನಾಗರಾಜ ಉಪಾಧ್ಯ, ಕೃಷ್ಣ ಮಠದ ಪಿಆರ್‌ಒ ಶ್ರೀಶ ಭಟ್, ಶ್ರೀಗಳ ಕಾರ್ಯದರ್ಶಿ ಗಿರೀಶ್ ಉಪಾಧ್ಯಾಯ ಉಪಸ್ಥಿತರಿದ್ದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

16 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago