Featured

ಉಡುಪಿ : ಪಾದೂರು ಐ.ಎಸ್.ಪಿ.ಆರ್.ಎಲ್ ವಿಸ್ತರಣೆ : ಸಂತ್ರಸ್ಥರಿಗೆ ಪರಿಷ್ಕೃತ ನಿಯಮಾವಳಿಯನ್ವಯ ಗರಿಷ್ಠ ಪರಿಹಾರ ನೀಡಿ : ಸಂಸದೆ ಶೋಭಾ -Vishwanews24

ಉಡುಪಿ : ಪಾದೂರು ಐ.ಎಸ್.ಪಿ.ಆರ್.ಎಲ್ ವಿಸ್ತರಣೆ : ಸಂತ್ರಸ್ಥರಿಗೆ ಪರಿಷ್ಕೃತ ನಿಯಮಾವಳಿಯನ್ವಯ ಗರಿಷ್ಠ ಪರಿಹಾರ ನೀಡಿ : ಸಂಸದೆ ಶೋಭಾ -Vishwanews24

ಉಡುಪಿ : ಪಾದೂರಿನಲ್ಲಿ ಎರಡನೇ ಹಂತದ ಐ.ಎಸ್.ಪಿ.ಆರ್.ಎಲ್ ಕ್ರೂಡ್ ಆಯಿಲ್  ಸ್ಟೋರೇಜ್ ನ 2ನೇ ಘಟಕದ ವಿಸ್ತರಣಾ ಯೋಜನೆಗೆ ಸಂಬ0ದಿಸಿದ0ತೆ 210 ಎಕ್ರೆ ಭೂ ಸ್ವಾಧೀನ ಅಗತ್ಯವಿದ್ದು, ಈ ಯೋಜನೆಯ ಸಂತ್ರಸ್ಥರಿಗೆ ಕೇಂದ್ರ ಸರ್ಕಾರದ ಪರಿಷ್ಕೃತ ಭೂ ಸ್ವಾಧೀನ ನಿಯಮಗಳನ್ವಯ ಗರಿಷ್ಠ ಪರಿಹಾರ ನೀಡುವಂತೆ ಸಂಸದೆ ಶೋಭಾ ಕರಂದ್ಲಾಜೆ ಸೂಚಿಸಿದರು.

ಅವರು ಸೋಮವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ವಿಸ್ತರಣಾ ಯೋಜನೆಯಿಂದ ಸಂತ್ರಸ್ಥರಾಗುವ ಸಾರ್ವಜನಿಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಐ.ಎಸ್.ಪಿ.ಆರ್.ಎಲ್ ಯೋಜನೆಯು ದೇಶದ ಅತ್ಯಂತ ಪ್ರಮುಖ ಯೋಜನೆಯಾಗಿದ್ದು, ಇದರಿಂದ 410 ಮಿಲಿಯನ್ ಬ್ಯಾರೆಲ್ ತೈಲ ಸಂಗ್ರಹ ಸಾಧ್ಯವಾಗಲಿದ್ದು, ಯೋಜನೆಯ 2 ನೇ ಘಟಕದ ವಿಸ್ತರಣೆಗೆ 210 ಎಕ್ರೆ ಜಾಗದ ಅಗತ್ಯವಿದ್ದು, ಯೋಜನೆಯಿಂದ ಜಾಗ ಕಳೆದುಕೊಳ್ಳುವವರಿಗೆ ಗರಿಷ್ಠ ಪರಿಹಾರ ನೀಡಿ ಅವರಿಗೆ ಸೂಕ್ತ ಪುರ್ನವಸತಿ ಸೌಲಭ್ಯ ಕಲ್ಪಿಸುವಂತೆ ಕೆ.ಐ.ಎ.ಡಿ.ಬಿ. ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಸ್ತರಣಾ ಸಮಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳಿಗೆ ಹಾನಿ ಸಂಭವಿಸಿದ0ತೆ ಹಾಗೂ ಸ್ಥಳದಲ್ಲಿನ 800 ವರ್ಷಗಳ ಹಿಂದಿನ ಜೈನ ಬಸದಿ ಹಾಗೂ ಸಮೀಪದ ಮನೆಗಳಿಗೆ ಹಾನಿಯಾಗದಂತೆ ರೀ ಸರ್ವೇ ನಡೆಸಿ, ಪರಿಷ್ಕೃತ ನಕ್ಷೆ ಸಿದ್ದಪಡಿಸಿ ಎಂದು ಸೂಚಿಸಿದ ಸಂಸದರು, ಪಾದೂರು ವ್ಯಾಪ್ತಿಯಲ್ಲಿನ ಭೂ ಪ್ರದೇಶದ ಎಸ್.ಆರ್. ಬೆಲೆಯನ್ನು ಹೆಚ್ಚು ಮಾಡಿ, ಭೂಮಿ ಕಳೆದುಕೊಳ್ಳುವ ಸಂತ್ರಸ್ಥರಿಗೆ ಗರಿಷ್ಠ ದೊರೆಯುವಂತೆ ಮಾಡಿ ಹಾಗೂ ಸಂತ್ರಸ್ಥರಿಗೆ ಸೂಕ್ತ ಉದ್ಯೋಗ ನೀಡುವಂತ ಶೋಭಾ  ಕರಂದ್ಲಾಜೆ ಸೂಚನೆ ನೀಡಿದರು.

ಉಡುಪಿ:ಕೇರಳ ಮತ್ತು ಮುಂಬೈಯಿ0ದ ಬರುವವರಿಗೆ ಆರ್.ಟಿ.ಪಿ.ಸಿ.ಆರ್ ಕಡ್ಡಾಯ : ಸಂಸದೆ ಶೋಭಾ ಕರಂದ್ಲಾಜೆ-Vishwanews24

2 ನೇ ಘಟಕದ ವಿಸ್ತರಣೆ ಕುರಿತಂತೆ ಪ್ರಾಥಮಿಕ ಸರ್ವೇ ನಡೆಸಲಾಗಿದೆ, 227 ಮಂದಿ ಸಂತ್ರಸ್ಥರಿಗೆ ನೋಟೀಸ್ ನೀಡಬೇಕಿದ್ದು, ಈಗಾಗಲೇ 30 ಮಂದಿಗೆ ನೋಟಿಸ್ ನೀಡಲಾಗಿದ್ದು, 3 ಜನ ನಿರಾಕರಣೆ ಮಾಡಿದ್ದಾರೆ, ಉಳಿದವರ ವಿಳಾಸ ಪತ್ತೆ ಹಚ್ಚಿ ನೋಟೀಸ್ ನೀಡುವ ಕಾರ್ಯ ಪ್ರಗತಿಯಲ್ಲಿದೆ, ನೋಟೀಸ್ ಪಡೆದ 30 ದಿನಗಳವೆರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕೆ.ಐ.ಯು.ಡಿ.ಬಿ. ಅಧಿಕಾರಿಗಳು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾಧಿಕಾರಿ ಜಿ.ಜಗದೀಶ್, ಸಿಇಓ ಡಾ.ನವೀನ್ ಭಟ್, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ,ಕಾಪು ತಾ.ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ , ಐ.ಎಸ್.ಪಿ.ಆರ್.ಎಲ್ ಅಧಿಕಾರಿ ಅಜಯ್, ರಾಜಶೇಖರ್ ಹಾಗೂ ಯೋಜನೆಯಿಂದ ಸಂತ್ರಸ್ಥರಾಗುವ ಸಾರ್ವಜನಿಕರು ಉಪಸ್ಥಿತರಿದ್ದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

11 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

11 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

11 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

12 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

12 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

13 hours ago