ಉಡುಪಿ: ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಸುಧಾಕರ ಕಾಂಚನ್ ಇವರು ಹೆಚ್.ಡಿ.ಎಫ್.ಸಿ ಬ್ಯಾಂಕ್, ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರಿಗೆ ಪಾನ್ಕಾರ್ಡ್ ಅಪ್ಡೇಟ್ ಮಾಡಲು ಸಂದೇಶ ಕಳುಹಿಸಿದ್ದ.
ಸದ್ರಿ ಸಂದೇಶದಲ್ಲಿರುವ ಲಿಂಕ್ನ್ನು ಬ್ಯಾಂಕ್ನಿಂದ ಕಳುಹಿಸಿರುವುದಾಗಿದೆ ಎಂದು ಪಿರ್ಯಾದಿದಾರರು ನಂಬಿ ಸದ್ರಿ ಲಿಂಕ್ನಲ್ಲಿ ವಿವರವನ್ನು ಅಪೌಡೇಟ್ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ರೂ.1,00,000/- ಹಣ ಆನ್ ಲೈನ್ ಮುಖೇನ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದುದಾರರನ್ನು ವಂಚಿಸಿ ಮೋಸದಿಂದ ಹಣ ವರ್ಗಾವಣೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 29/2023 ಕಲಂ 66(C), 66(D), ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…