Featured

ಉಡುಪಿ: ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ : ತೇಜಸ್ವಿ ಸೂರ್ಯ  – Vishwanews24

ಉಡುಪಿ: ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ : ತೇಜಸ್ವಿ ಸೂರ್ಯ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಬ್ಲಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಸಂಸದ ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದ್ದಾರೆ.

ಉಡುಪಿಯಲ್ಲಿ (Udupi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶವಿದ್ದಂತಿದೆ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ.

ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು, ಈಗ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್‍ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದಿದ್ದಾರೆ.

ಮಣಿಪಾಲ: ಕರಾವಳಿಯಲ್ಲಿ ಎನ್ಐಎ ಘಟಕ ಆರಂಭಕ್ಕೆ ಸಂಸತ್ ನಲ್ಲಿ ವಿಷಯ ಪ್ರಸ್ತಾಪ: ತೇಜಸ್ವಿ ಸೂರ್ಯ – Vishwanews24

ಭಯೋತ್ಪಾದನೆ ಸದೆಬಡಿಯುವ ತನಕ ನಾವು ವಿಶ್ರಮಿಸಲ್ಲ. ನಮ್ಮ ಸರ್ಕಾರಗಳು ವಿಶ್ರಮಿಸುವುದಿಲ್ಲ. ಈವರೆಗೆ ರಾಜ್ಯದಲ್ಲಿ ದೊಡ್ಡಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್‍ಐಎ ಆಫೀಸ್ ಬೇಕಾಗಿದೆ. ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ. ಕರಾವಳಿಯಲ್ಲಿ ಎನ್‍ಐಎ ಕ್ಯಾಂಪ್ ಆಫೀಸ್ ಸ್ಥಾಪನೆ ಮಾಡಬೇಕು ಎಂದು ತಿಳಿಸಿದ್ದಾರೆ.

ಕೆಜೆಹಳ್ಳಿ ಡಿಜೆಹಳ್ಳಿ ಪ್ರಕರಣವಾದಾಗಲೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೆ. ಈಗ ಮತ್ತೆ ಕೇಂದ್ರ ಸರ್ಕಾರ ಜೊತೆ ಮಾತನಾಡುತ್ತೇನೆ.

ಪೊಲೀಸ್ ಇಂಟೆಲಿಜನ್ಸ್ ಎನ್‍ಐಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು. ರಾಜ್ಯದ ಜನರ ಜೀವ ಮತ್ತು ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯ. ನಾವು ಓಟ್ ಬ್ಯಾಂಕ್‍ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ. ರಾಷ್ಟ್ರೀಯ ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆಯಿದೆ. ದೇಶದ ಸುರಕ್ಷತೆ ವಿಚಾರದಲ್ಲಿ ಕಾಂಪ್ರಮೈಸ್ ಮಾಡಲ್ಲ ಎಂದು ಹೇಳಿದ್ದಾರೆ.

⏺️ ಆಸ್ಪತ್ರೆಯಲ್ಲಿ ದಾಖಲಾತಿ ನಿರಾಕರಣೆ – ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago