ಉಡುಪಿ: ರಾಜ್ಯದಲ್ಲಿ ನಡೆದಿರುವ ಪಿಎಸ್ಐ ಹಗರಣ ದಿನಕ್ಕೊಂದು ತಿರುವು ಪಡೆಯುತ್ತ, ಬಗೆದಷ್ಟೂ ಆಳ ಎಂಬಂತಾಗುತ್ತಿದ್ದು, ಇದೀಗ ಆ ಸಂಬಂಧವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಗೂ ಇದೀಗ ಆಪ್ ಮುಖಂಡರಾಗಿರುವ ಭಾಸ್ಕರ್ ರಾವ್ ಮಹತ್ವದ ಸಂಗತಿಯೊಂದನ್ನು ಹೇಳಿದ್ದಾರೆ.
ಇಂದು ಉಡುಪಿಯಲ್ಲಿ ಮಾತನಾಡಿರುವ ಅವರು, ಪಿಎಸ್ಐ ಹಗರಣದ ಕುರಿತು ನನಗೆ ಮೊದಲೇ ವಾಸನೆ ಇತ್ತು ಎಂಬುದಾಗಿ ತಿಳಿಸಿದ್ದಾರೆ. ನಾನು ಬೆಂಗಳೂರು ನಗರ ಪೋಲಿಸ್ ಆಯುಕ್ತ ಆಗಿದ್ದಾಗ ಅಮೃತ್ ಪೌಲ್ ಮುಂದಿನ ಕಮಿಷನರ್ ಆಗುತ್ತಾರೆ ಎಂಬ ಸುದ್ದಿ ಇತ್ತು. ಆಗಾಗ್ಯೆ ಮುಖ್ಯಮಂತ್ರಿ ಮನೆಗೆ ಬರುವಾಗ ಕೂಡ ನಾನು ಪ್ರಶ್ನೆ ಮಾಡಿದ್ದೆ. ಇದು ಹಗರಣ ಎಂಬುವುದಾಗಿ ನನಗೆ ಮೊದಲೇ ಗೊತ್ತಿತ್ತು ಎಂದಿರುವ ಅವರು, ರಾಜ್ಯಪಾಲರ ಬಳಿಗೆ ಈ ವಿಷಯವನ್ನು ಕೊಂಡೊಯ್ದ ಮೊದಲ ಪಕ್ಷ ಆಮ್ ಆದ್ಮಿ ಎಂಬುದಾಗಿಯೂ ಅವರು ಹೇಳಿದ್ದಾರೆ.
ಇದನ್ನೂ ಓದಿ :ನಾನು ರಾಜಕೀಯಕ್ಕೆ ಬರುವುದಕ್ಕೆ ಕಾರಣ ಮುಸ್ಲಿಂ ಗುರುಗಳಲ್ಲ , ಆದಿಚುಂಚನಗಿರಿ ಸ್ವಾಮಿಗಳು : ಜಮೀರ್ – Vishwanews24
ಇನ್ನು ತನಿಖೆ ಆಗುವವರೆಗೂ ಪರೀಕ್ಷೆ ಮಾಡುವುದಿಲ್ಲ ಎನ್ನುವುದು ತಪ್ಪು ನೀತಿ. ನೀವು ಯುವಜನರಿಗೆ ಮೋಸ ಮಾಡುತ್ತಿದ್ದೀರಿ. ಇಡೀ ಪರೀಕ್ಷೆಯನ್ನೇ ರದ್ದುಗೊಳಿಸಿ ಹೊಸದಾಗಿ ಪರೀಕ್ಷೆಯನ್ನು ನಡೆಸಿ ಎಂದಿರುವ ಅವರು, ಸಿಐಡಿ ಒಳಗೆ ಹೋದ ಮೇಲೆ ಹೋಂ ಮಿನಿಸ್ಟರ್ ಮತ್ತು ಸಿಎಂ ಇನ್ವೆಸ್ಟಿಗೇಶನ್ ಆಫೀಸರ್ ಆಗುತ್ತಾರೆ. ಇದು ನ್ಯಾಯಾಂಗದಲ್ಲಿ ತನಿಖೆ ಆಗಬೇಕು ಎಂದು ನಾನು ಮೊದಲೇ ಆಗ್ರಹ ಮಾಡಿದ್ದೆ. ನ್ಯಾಯಾಂಗ ತನಿಖೆ ಆರಂಭ ಆದ 24 ಗಂಟೆಗಳಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಅವರು ಹೇಳಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…