Featured

ಉಡುಪಿ : ಪಿಡಿಒ ನಿಂದ ರಾಷ್ಟ್ರಪತಿ ವರೆಗೆ RSS ಕಾರ್ಯಕರ್ತರು ಇದ್ದಾರೆ  : ಹೆಚ್ಡಿಕೆಗೆ  ಸುನೀಲ್‌ ಕುಮಾರ್‌ ತಿರುಗೇಟು – Vishwanews24

ಪಿಡಿಒ ನಿಂದ ರಾಷ್ಟ್ರಪತಿ ವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ  : ಹೆಚ್ಡಿಕೆಗೆ  ಸುನೀಲ್‌ ಕುಮಾರ್‌ ತಿರುಗೇಟು – Vishwanews24

ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ರಾಜ್ಯ ಇಂಧನ ಸಚಿವ ವಿ. ಸುನೀಲ್‌ ಕುಮಾರ್‌ ತಿರುಗೇಟು ನೀಡಿದ್ದು ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದಾರೆ ಆದರೆ ಕುಮಾರ ಸ್ವಾಮಿಯವರ ಲೆಕ್ಕಾಚಾರ ಕಡಿಮೆಯಾಗಿದೆ, ಇನ್ನು ಹೆಚ್ಚು ಮಂದಿ ಇದ್ದಾರೆ ಎಂದು ಹೇಳೀದ್ದಾರೆ.

ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆಯಾಗಿದ್ದು ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆಯಾಗಿದೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು ಮಾಡಿದ್ದು, ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡವರು ಬೇರೆಬೇರೆ ಕ್ಷೇತ್ರದಲ್ಲಿದ್ದಾರೆ. ಆರೆಸ್ಸೆಸ್‌ ನಲ್ಲಿ ತರಬೇತಿ ಹೊಂದಿದವರು ಸಾವಿರಾರು ಮಂದಿ ವಿವಿಧ ಕ್ಷೇತ್ರಗಳಲ್ಲಿ ಇದ್ದಾರೆ ಅದು ಕೇವಲ ಐಎಎಸ್ ಐಪಿಎಸ್ ಗಳು ಮಾತ್ರ ಅಲ್ಲ. ಪಿಡಿಒ ನಿಂದ ರಾಷ್ಟ್ರಪತಿ ವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ. ಎಲ್ಲರ ಮುಖಾಂತರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಇದ್ದು, ರಾಷ್ಟ್ರ ನಿರ್ಮಾಣದ ಪರ ಇರುವವರು ಇದನ್ನು ಸ್ವಾಗತಿಸಿದರೆ, ರಾಷ್ಟ್ರ ನಿರ್ಮಾಣದ ಕನಸು ಇಲ್ಲದವರು ವಿರೋಧಿಸುತ್ತಾರೆ. ಈ ರೀತಿ ಮಾತನಾಡುವವರ ಬಗ್ಗೆ ಅನುಕಂಪವಿದೆ ಎಂದರು.

ಭಾರತ ವಿಶ್ವಕ್ಕೆ ಮಾರ್ಗದರ್ಶನ ಮಾಡಬೇಕೆಂದು ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಬಯಸಿದ್ದರು ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆ ಸಾಧನೆಯನ್ನು ನನಸು ಮಾಡುತ್ತಿದ್ದಾರೆ. ಭಾರತ ನಂಬರ್1 ಆಗಲು ವ್ಯಕ್ತಿ ನಿರ್ಮಾಣವಾಗಬೇಕು ವ್ಯಕ್ತಿ ನಿರ್ಮಾಣ ಮಾಡುವ ಏಕೈಕ ಸಂಘಟನೆ ಆರೆಸ್ಸೆಸ್. ಅಪ್ಪ ಮಕ್ಕಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ-ಬೇರೆ ರೀತಿ ಮಾತನಾಡುತ್ತಾರೆ. ಆರೆಸ್ಸೆಸ್ ಹೆಸರನ್ನು ಬೇಕಾದಂತೆ ಬಳಸಿಕೊಂಡಿದ್ದಾರೆ ಆದರೆ ಅವರಿಗೆ ಬೇಕಾದಂತೆ ಬಳಸಿಕೊಳ್ಳುವ ಸಂಘಟನೆ ಆರೆಸ್ಸೆಸ್ ಅಲ್ಲ ಮತ್ತು ಕುಮಾರಸ್ವಾಮಿ ಹೇಳಿದರು ಅಂತ ಈ ಕೆಲಸ ನಿಲ್ಲೋದಿಲ್ಲ. ಈ ಕೆಲಸ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದರು.

ಶಾರೂಖ್​ ಪುತ್ರನ ಪರ ಜಾಮೀನಿಗಾಗಿ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿರುವ ವಕೀಲ ಕರ್ನಾಟಕ ಮೂಲದ ಸತೀಶ ಮಾನೆಶಿಂಧೆ – Vishwanews24

Vishwa News 24

Recent Posts

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – vishwanews24

ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…

7 hours ago

BREAKING NEWS: ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ – vishwanews24

BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…

7 hours ago

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  – vishwanews24

ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ  ಮುಂಬೈ: ಮುಂಬರುವ ಮುಂಗಾರು…

8 hours ago

ಮಂಗಳೂರು: ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ನನಗೆ ಮಾಹಿತಿ ಇಲ್ಲ: ಯುಟಿ ಖಾದರ್ – vishwanews24

ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…

8 hours ago

ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು ಕಾನೂನು ಪಾಲನೆ ಮಾಡುತ್ತಾರೆ : ಹೈಕೋರ್ಟ್ ನ್ಯಾಯಮೂರ್ತಿ – vishwanews24

ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…

8 hours ago

ನಾಳೆಯಿಂದ ರಾಜ್ಯದಲ್ಲಿ ಡಿಕೆಶಿ ದರ್ಬಾರ್‌ ; ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆಶಿ ರೋಚಕ ಪಯಣ – vishwanews24

ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ  ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…

9 hours ago