ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ರಾಜ್ಯ ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿರುಗೇಟು ನೀಡಿದ್ದು ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದಾರೆ ಆದರೆ ಕುಮಾರ ಸ್ವಾಮಿಯವರ ಲೆಕ್ಕಾಚಾರ ಕಡಿಮೆಯಾಗಿದೆ, ಇನ್ನು ಹೆಚ್ಚು ಮಂದಿ ಇದ್ದಾರೆ ಎಂದು ಹೇಳೀದ್ದಾರೆ.
ಅವರು ಬುಧವಾರ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆಯಾಗಿದ್ದು ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆಯಾಗಿದೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು ಮಾಡಿದ್ದು, ವ್ಯಕ್ತಿತ್ವ ನಿರ್ಮಾಣ ಮಾಡಿಕೊಂಡವರು ಬೇರೆಬೇರೆ ಕ್ಷೇತ್ರದಲ್ಲಿದ್ದಾರೆ. ಆರೆಸ್ಸೆಸ್ ನಲ್ಲಿ ತರಬೇತಿ ಹೊಂದಿದವರು ಸಾವಿರಾರು ಮಂದಿ ವಿವಿಧ ಕ್ಷೇತ್ರಗಳಲ್ಲಿ ಇದ್ದಾರೆ ಅದು ಕೇವಲ ಐಎಎಸ್ ಐಪಿಎಸ್ ಗಳು ಮಾತ್ರ ಅಲ್ಲ. ಪಿಡಿಒ ನಿಂದ ರಾಷ್ಟ್ರಪತಿ ವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ. ಎಲ್ಲರ ಮುಖಾಂತರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಇದ್ದು, ರಾಷ್ಟ್ರ ನಿರ್ಮಾಣದ ಪರ ಇರುವವರು ಇದನ್ನು ಸ್ವಾಗತಿಸಿದರೆ, ರಾಷ್ಟ್ರ ನಿರ್ಮಾಣದ ಕನಸು ಇಲ್ಲದವರು ವಿರೋಧಿಸುತ್ತಾರೆ. ಈ ರೀತಿ ಮಾತನಾಡುವವರ ಬಗ್ಗೆ ಅನುಕಂಪವಿದೆ ಎಂದರು.
ಭಾರತ ವಿಶ್ವಕ್ಕೆ ಮಾರ್ಗದರ್ಶನ ಮಾಡಬೇಕೆಂದು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಬಯಸಿದ್ದರು ಅವರ ಕನಸನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆ ಸಾಧನೆಯನ್ನು ನನಸು ಮಾಡುತ್ತಿದ್ದಾರೆ. ಭಾರತ ನಂಬರ್1 ಆಗಲು ವ್ಯಕ್ತಿ ನಿರ್ಮಾಣವಾಗಬೇಕು ವ್ಯಕ್ತಿ ನಿರ್ಮಾಣ ಮಾಡುವ ಏಕೈಕ ಸಂಘಟನೆ ಆರೆಸ್ಸೆಸ್. ಅಪ್ಪ ಮಕ್ಕಳು ಬೇರೆ ಬೇರೆ ಸಂದರ್ಭದಲ್ಲಿ ಬೇರೆ-ಬೇರೆ ರೀತಿ ಮಾತನಾಡುತ್ತಾರೆ. ಆರೆಸ್ಸೆಸ್ ಹೆಸರನ್ನು ಬೇಕಾದಂತೆ ಬಳಸಿಕೊಂಡಿದ್ದಾರೆ ಆದರೆ ಅವರಿಗೆ ಬೇಕಾದಂತೆ ಬಳಸಿಕೊಳ್ಳುವ ಸಂಘಟನೆ ಆರೆಸ್ಸೆಸ್ ಅಲ್ಲ ಮತ್ತು ಕುಮಾರಸ್ವಾಮಿ ಹೇಳಿದರು ಅಂತ ಈ ಕೆಲಸ ನಿಲ್ಲೋದಿಲ್ಲ. ಈ ಕೆಲಸ ಇನ್ನಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಅವರು ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…