ಉಡುಪಿ,: ಪಿನಾಯಿಲ್ ಮಾರುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡುವ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಬಂದಿರುವುದಾಗಿ ಮಣಿಪಾಲ ಪೊಲೀಸರು ಪ್ರಕಟಣೆ ನೀಡಿದ್ದಾರೆಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ‘ಇದೊಂದು ಸುಳ್ಳು ಪ್ರಕಟಣೆಯಾಗಿದೆ’ ಎಂದು ಮಣಿಪಾಲ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್ ಗೋಯಲ್ -Vishwanews24
ಪಿನಾಯಿಲ್ ಮಾರುವ ನೆಪದಲ್ಲಿ ಮನೆ ಮನೆಗೆ ತೆರಳಿ ಪಿನಾಯಿಲ್ನಂತೆ ಇರುವ ಬಾಟಲಿಯ ವಾಸನೆ ತೋರಿಸಿ ಮೂರ್ಛೆ ಹೋಗುವಂತೆ ಮಾಡಿ ಮನೆಯಲ್ಲಿರುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗುವ ಸುಮಾರು ಐದರಿಂದ ಆರು ಜನ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಆಗಮಿಸಿದ್ದು, ಇಂತಹವರು ತಮ್ಮ ಮನೆಯ ಮುಂದೆ ಓಡಾಡಿಕೊಂಡಿದ್ದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಣಿಪಾಲ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ ಎಂಬುದಾಗಿ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್, ನಾವು ಇಂತಹ ಪ್ರಕಟಣೆಯನ್ನು ಕೊಟ್ಟಿಲ್ಲ. ಇದೇ ರೀತಿಯ ಸಂದೇಶ ಆರು ತಿಂಗಳ ಹಿಂದೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಲೂ ನಾವು ಕೊಟ್ಟಿಲ್ಲ, ಈಗಲೂ ನಾವು ಪ್ರಕಟಣೆ ಕೊಟ್ಟಿಲ್ಲ. ಇದೊಂದು ಸುಳ್ಳು ಪ್ರಕಟಣೆಯಾಗಿದೆ ಎಂದು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…