Featured

ಉಡುಪಿ :  ಪಿಯುಸಿ ಪರೀಕ್ಷೆ ಹಿಜಾಬ್ ವಿಚಾರದಲ್ಲಿ ಗೊಂದಲಕ್ಕೆ ಅವಕಾಶ ಇಲ್ಲ : ಯಶ್ಪಾಲ್ ಸುವರ್ಣ -Vishwanews24

ಉಡುಪಿ :  ಪಿಯುಸಿ ಪರೀಕ್ಷೆ ಹಿಜಾಬ್ ವಿಚಾರದಲ್ಲಿ ಗೊಂದಲಕ್ಕೆ ಅವಕಾಶ ಇಲ್ಲ : ಯಶ್ಪಾಲ್ ಸುವರ್ಣ -Vishwanews24

ದ್ವಿತೀಯ ಪಿಯು ಪರೀಕ್ಷೆ ಶುಕ್ರವಾರದಿಂದ ಆರಂಭವಾಗಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದರು.

ಅವರು ಗುರುವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಹಿಜಬ್ ವಿಚಾರದಲ್ಲಿ ಬಹಳ ಗೊಂದಲ ಅಡೆತಡೆ ಸೃಷ್ಟಿಯಾಗಿದೆ, ಎಲ್ಲರೂ ಸರಕಾರದ ಸುತ್ತೋಲೆ ಸೂಚನೆ ಪಾಲಿಸಬೇಕು, ಹಿಜಾಬ್ ಗಾಗಿ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿಗಳು ಕೋರ್ಟ್ ಆದೇಶ ಧಿಕ್ಕರಿಸಿದ್ದಾರೆ. ಆದರೆ ಭವಿಷ್ಯದ ಚಿಂತನೆ ಮಾಡಿ, ನಿಯಮ ಉಲ್ಲಂಘನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಮತ್ತೆ ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಸೃಷ್ಟಿಸಬೇಡಿ ಎಂದು ಕರೆ ನೀಡಿದ್ದಾರೆ

ವಿದ್ಯಾರ್ಥಿಗಳಲ್ಲಿ ಯಾವುದೇ ಬೇಧಭಾವ ಇಲ್ಲ, ನಾಳೆ ಬೆಳಗ್ಗೆಯೂ ಹಾಲ್ ಟಿಕೆಟ್ ಪಡೆಯಬಹುದು. ಹಿಜಾಬ್ ಹಾಕಿ ಪರೀಕ್ಷೆಗೆ ಬಂದರೆ ಅವಕಾಶ ಇಲ್ಲ, ಹೈಕೋರ್ಟ್ ಗೆ ನ್ಯಾಯಮೂರ್ತಿಗಳಿಗೆ ಅಗೌರವ ತೋರಿದವರು, ರಾಜ್ಯದಾದ್ಯಂತ ರಾದ್ಧಾಂತ ಮಾಡಿ ಸಿಎಂ ಗೆ ಮನವಿ ಮಾಡೋದು ಎಷ್ಟು ಸರಿ???

ಆರು ಜನ ವಿದ್ಯಾರ್ಥಿಗಳು ಟೆರರಿಸ್ಟ್ ಸಂಘಟನೆ ಜೊತೆ ಗುರುತಿಸಿದವರು, ದೇಶದ್ರೋಹಿ ಮತಾಂಧ ಸಂಘಟನೆ ವಿದ್ಯಾರ್ಥಿಗಳಿಗೆ ಬೆಂಬಲಿಸಿವೆ, ಆರು ವಿದ್ಯಾರ್ಥಿಗಳು ಶಿಕ್ಷಣದ ಮಹತ್ವ ಅರಿತಿಲ್ಲ. ಪರೀಕ್ಷೆ ಬಗ್ಗೆ ಅವರಿಗೆ ಮಹತ್ವ ಅರಿವು ಇರುವ ಸಾಧ್ಯತೆ ಕಡಿಮೆ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಿಂತ ಧರ್ಮ, ಹಿಜಬ್ ಮುಖ್ಯವಾಗಿದೆ ಎಂದರು .

ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್, ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago