ಉಡುಪಿ : ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು https://www.kviconline.gov.in/pmegpeportal/jsp/pmegponline.jsp ವೆಬ್ಸೈಟ್ ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080-28375023 ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವoತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…