ಉಡುಪಿ : ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಗರಿಷ್ಠ ಯೋಜನಾ ವೆಚ್ಚ 25 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಮೇಲೆ ಶೇ. 15 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿಯನ್ನು https://www.kviconline.gov.in/pmegpeportal/jsp/pmegponline.jsp ವೆಬ್ಸೈಟ್ ಮೂಲಕ ಸಲ್ಲಿಸುವಾಗ ಫೋಟೊ, ಯೋಜನಾ ವರದಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜನಸಂಖ್ಯೆ ಪ್ರಮಾಣ ಪತ್ರ ಹಾಗೂ ವಿದ್ಯಾಭ್ಯಾಸದ ದಾಖಲಾತಿಗಳನ್ನು ಅಪ್ಲೋಡ್ ಮಾಡಿದ ನಂತರ ಅರ್ಜಿಯನ್ನು ಪ್ರಿಂಟ್ ಮಾಡಿ ಸಂಬAಧಪಟ್ಟ ದಾಖಲಾತಿಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2575650, ಜಿಲ್ಲಾ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, 2ನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574855, ರಾಜ್ಯ ನಿರ್ದೇಶಕರು, ಖಾದಿ ಗ್ರಾಮೋದ್ಯೋಗ ಆಯೋಗ, ದೂರವಾಣಿ ನಗರ, ವಿಜಿನಾಪುರ, ಬೆಂಗಳೂರು ದೂ.ಸಂಖ್ಯೆ: 080-25665885 / 080-25665883 ಹಾಗೂ ಪ್ರಾದೇಶಿಕ ಕಛೇರಿ, ಕಾಯರ್ ಬೋರ್ಡ್, ನಂ: 3ಎ, ಪೀಣ್ಯಾ ಕೈಗಾರಿಕಾ ಪ್ರದೇಶ, ಟಿವಿಎಸ್ ಕ್ರಾಸ್ ಹತ್ತಿರ, ಬೆಂಗಳೂರು, ದೂ.ಸಂಖ್ಯೆ: 080-28375023 ಇವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಹಾಗೂ ಉಡುಪಿ, ಕಾರ್ಕಳ ಅಥವಾ ಕುಂದಾಪುರ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವoತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…