Featured

ಉಡುಪಿ : ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ : ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಉಡುಪಿ : ಸುಮಾರು ಒಂದೂವರೆ ವರ್ಷಗಳ ನಂತರ ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ
ಆಗಮಿಸಿದ, ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ
ಸ್ವಾಗತಿಸಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ ಅಂಗನವಾಡಿ ಕೇಂದ್ರದಲ್ಲಿ ಬಲೂನು, ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಅಂಗನವಾಡಿ
ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭಾಗವಹಿಸಿದರು.

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಆಗಮನಕ್ಕೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು, ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ
ಜಿಲ್ಲಾಧಿಕಾರಿಗಳು, ಮಕ್ಕಳು ಮತ್ತು ಪೋಷಕರು ಕೇಂದ್ರಕ್ಕೆ ಉತ್ಸಾಹದಿಂದ ಆಗಮಿಸುತ್ತಿದ್ದು, ಸ್ಥಳೀಯರಿಂದ ಉತ್ತಮ ಸಹಕಾರ ದೊರೆತಿದ್ದು,
ಇಂದು ಜಿಲ್ಲೆಯ ಎಲ್ಲಾ 1191 ಅಂಗನವಾಡಿಗಳು ಆರಂಭಗೊAಡಿದ್ದು, ಎಲ್ಲಾ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಗರಿಷ್ಠ ಸುರಕ್ಷಾ
ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಯಾವುದೇ ಆತಂಕವಿಲ್ಲದೇ ಪ್ರತಿದಿನ ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಿಗೆ
ಕಳುಹಿಸುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ಗೀತಾ ಶೇಟ್, ಬಾಲ ವಿಕಾಸ ಸಮಿತಿಯ ಸದಸ್ಯರು, ಪೋಷಕರು, ಸ್ಕೌಟ್ಸ್ ಮತ್ತು ಗೈಡ್ಸ್ ಸಿಬ್ಬಂದಿ,
ಆಶಾ ಕಾರ್ಯಕರ್ತೆಯರು ಮತ್ತಿತರರು ಭಾಗವಹಿಸಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಸುಮಲತಾ ವಂದಿಸಿದರು.

ಕಾಜಾರಾಗುತ್ತುನಲ್ಲಿ ಆರತಿ ಬೆಳಗಿ ಸ್ವಾಗತ : ಕಾಜಾರಗುತ್ತು ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಮಕ್ಕಳಿಗೆ ಆರತಿ ಬೆಳಗುವುದರ ಮೂಲಕ ಮತ್ತು
ಪುಷ್ಪವೃಷ್ಠಿ ಸುರಿಸುವುದರ ಮೂಲಕ ನಲ್ಮೆಯ ಸ್ವಾಗತ ಕೋರಲಾಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ
ಶೇಷಪ್ಪ, ಕೋಡಿಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಆಶಾ ಶೆಟ್ಟಿ, ಉಪಾಧ್ಯಕ್ಷ ಸದಾನಂದ ಪ್ರಭು, ಪಿಡಿಓ ರೇವತಿ, ಗ್ರಾ.ಪಂ.ನ ಸದಸ್ಯರು, ಬಾಲ ವಿಕಾಸ
ಸಮಿತಿ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago