Featured

ಉಡುಪಿ : ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ಆಗಮನ – vishwanews24

ಉಡುಪಿ : ಪುತ್ತಿಗೆ ಪರ್ಯಾಯ ಮಹೋತ್ಸವಕ್ಕೆ ವಿದೇಶೀ ಗಣ್ಯರ ಆಗಮನ

ಉಡುಪಿ: ಭಾರತೀಯ ಪರಂಪರೆ, ಮಾಧ್ವ ತತ್ವವನ್ನು ಜಗತ್ತಿಗೆ ಸಾರಿದ ಹಾಗೂ ಗೀತಾಸಾರವನ್ನು ವಿಶ್ವಕ್ಕೆ ಪಸರಿಸಲು ಕಾರಣವಾಗಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಪರ್ಯಾಯ ಪೀಠಾರೋಹಣ ಕಾರ್ಯಕ್ರಮ ಈಗಾಗಲೇ ವಿಶ್ವಪರ್ಯಾಯವೆಂದು ಘೋಷಣೆಯಾಗಿದ್ದು ಜನವರಿ 18 ರಂದು ನಡೆಯಲಿರುವ ಪರ್ಯಾಯಕ್ಕೆ ವಿದೇಶಿ ಗಣ್ಯರು ಕೂಡ ಸಾಕ್ಷಿಯಾಗಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

ಆಸ್ಟ್ರೇಲಿಯಾದ ಲ್ಯೂಕ್ ಡನೆಲನ್

ಆಸ್ಟ್ರೇಲಿಯಾದ ವಿಕ್ಟೋರಿಯಾದ ಮಾಜಿ ಸಚಿವರಾಗಿರುವ ಲ್ಯೂಕ್ ಡನೆಲನ್ ಅವರು ವಿಕ್ಟೋರಿಯದಲ್ಲಿರುವ ದಕ್ಷಿಣ ಭಾರತದ ಹಿಂದೂ ಸಮುದಾಯಕ್ಕೆ ಅಲ್ಲಿ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ಸ್ಥಾಪಿಸಿರುವ ಕೃಷ್ಣ ದೇವಾಲಯ ಹಿಂದುಗಳ ಹಬ್ಬಗಳ ಆಚರಣೆಯಲ್ಲಿ ವಹಿಸುತ್ತಿರುವ ಮಹತ್ವಪೂರ್ಣ ಸೇವೆಯನ್ನು ಅವರು ಶ್ಲಾಘಿಸಿದ್ದು, ಜನವರಿ 18ರಂದು ನಡೆಯುವ ಪರ್ಯಾಯ ಮಹೋತ್ಸವದಲ್ಲಿ ಭಾಗವಹಿಸುವ ದಿನಕ್ಕಾಗಿ ಕಾಯುತ್ತಿದ್ದೇನೆ ಎಂದು ಶ್ರೀಗಳಿಗೆ ಪತ್ರ ಬರೆದಿದ್ದಾರೆ.

ಅಮೆರಿಕಾದ ಡಾ. ವಿಲಿಯಮ್ ವೆಂಡ್ಲೆ

ಅಮೆರಿಕಾದ ವರ್ಲ್ಡ್ ರಿಲಿಜಿಯಸ್ ಮತ್ತು ಸ್ಪಿರಿಚುವಾಲಿಟಿ ಉಪಾಧ್ಯಕ್ಷ ಡಾ. ವಿಲಿಯಮ್ ವೆಂಡ್ಲೆ ಯವರು ಆಧುನಿಕ ವಿಜ್ಞಾನ ಮತ್ತು ಇತಿಹಾಸ, ಧರ್ಮಗಳ ನಡುವೆ ಸಮನ್ವಯ ಸಾಧಿಸುವ ಶೇರ್ಡ್ ಸೇಕ್ರೆಡ್ ಸ್ಟೋರಿ ಎಂಬ ಯೋಜನೆಯ ಮುಖ್ಯಸ್ಥರು. ಡಾಂ ವೆಂಡ್ಲಿ ಫೆಟ್ಲರ್ ಎಂಬ ಸಂಸ್ಥೆ ಸೇರುವ ಮೊದಲು 27 ವರ್ಷ ರಿಲಿಜಿಯನ್ಸ್ ಫಾರ್ ಪೀಸ್ ಮಹಾಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ರಿಲಿಜಿಯನ್ಸ್ ಫಾರ್ ಪೀಸ್ ಎಂಬುದು ವಿಶ್ವದ ಬೃಹತ್ತಾದ ಒಂದು ಬಹುಧರ್ಮೀಯ ಸಂಘಟನೆಯಾಗಿದೆ. ಇದು ವಿಶ್ವದ 100ಕ್ಕೂ ಅಧಿಕ ದೇಶಗಳಲ್ಲಿ ಕಾರ್ಯವೆಸಗುತ್ತಿದೆ.

10 ವರ್ಷಗಳ ಕಾಲ ನಡೆದ ಅಂತರ್ಯುದ್ಧದ ನಡುವೆ ಸಿಯೆರಾ ಲಿಯೋನ ಅಂತರ್ ಧಾರ್ಮಿಕ ಸಮಿತಿ, ಎಚ್.ಐ.ವಿ. ಏಡ್ಸ್ ನಿಂದ ಅನಾಥರಾದ ಆಫ್ರಿಕಾದ ಮಕ್ಕಳ ನೆರವಿಗೆ ಸ್ಥಾಪಿಸಲಾದ ಹೋಪ್ ಫಾರ್ ಆಫ್ರಿಕನ್ ಚಿಲ್ಡ್ರನ್ ಸಂಸ್ಥೆಯ ಸಹ-ಸಂಸ್ಥಾಪಕರಾಗಿರುವ ಡಾ ವೆಂಡ್ಲಿ, ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳ ವಿಜೇತರು. ಡಾಂ ವೆಂಡ್ಲಿ ಶ್ರೀ ಸುಗುಣೇಂದ್ರ ತೀರ್ಥರನ್ನು ಹಿಂದು ಆಧ್ಯಾತ್ಮಿಕ ಪರಂಪರೆಯ ಸಾಕಾರಮೂರ್ತಿ ಎಂದು ಶ್ಲಾಘಿಸುತ್ತಾರೆ.

ಜಪಾನಿನ ರೆ.ಕೋಶೋ ನಿವಾನೊ

ರೆವರೆಂಡ್ ಕೊಶೊ ನಿವಾನೊರವರು ಜಪಾನಿನ ಜನಸಾಮಾನ್ಯರ ಒಂದು ದೊಡ್ಡ ಚಳವಳಿಯಾಗಿರುವ ರಿಶ್ಯೊ ಕೊಸೀ ಕ್ಯಾಯ ನಿಯೋಜಿತ ಅಧ್ಯಕ್ಷೆಯಾಗಿದ್ದಾರೆ. ಟೊಕಿಯೋದಲ್ಲಿ ನೆಲೆಸಿದ ಇವರು, ಅಧ್ಯಕ್ಷ ನಿಚಿಕೊ ನಿವಾನೊ ಅವರ ಮೊದಲ ಪುತ್ರಿ. ದೇಶಿಯ ಹಾಗೂ ಅಂತಾರಾಷ್ಟ್ರೀಯ ಅಂತರ್ ಧಾರ್ಮಿಕ ಸಂವಾದ ಹಾಗೂ ಶಾಂತಿ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಿವಾನೊ ಅವರು ರಿಲಿಜನ್ಸ್ ಫಾರ್ ಪೀಸ್ ಮತ್ತು ದಿ ಕಿಂಗ್ ಅಬ್ದುಲ್ಲಾ ಬಿನ್ ಅಬ್ದುಲ್ಲ ಜೀಜ್ ಇಂಟರ್ನ್ಯಾಶನಲ್ ಸೆಂಟರ್ ಫಾರ್ ಇಂಟರ್ ರಿಲಿಜಿಯಸ್ ಆಂಡ್ ಇಂಟರ್ ಕಲ್ಜರಲ್ ಡಯಲಾಗ್ ನಂಥ ಹಲವು ಸಂಘಟನೆಗಳಲ್ಲಿ ತೊಡಗಿಸಿಕೊಂಡವರು.

ಜಪಾನ್ನ ರಿಫ್ ಇಂಟರ್ ನ್ಯಾಶನಲ್ನ ಸಹಸಂವಾದಿ ಹಾಗೂ ಕಾರ್ಯನಿರ್ವಾಹಕ ಸಮಿತಿ ಸದಸ್ಯೆಯಾಗಿದ್ದಾರೆ. ಕೆಎಐಸಿಐಐಡಿಯ ನಿರ್ದೇಶಕ ಮಂಡಳಿ ಸದಸ್ಯೆ, ಜಪಾನಿನ ಫೆಡರೇಶನ್ ಆಫ್ ನ್ಯೂರಿಲಿಜಿಯಸ್ ಆರ್ಗನೈಸೇಶನ್ನ ಕಾರ್ಯನಿರ್ವಾಹಕ ನಿರ್ದೇಶಕಿ. ಸೋಫಿಯಾ ವಿಶ್ವವಿದ್ಯಾನಿಲಯದಿಂದ ಅಂತರ್ ಧಾರ್ಮಿಕ ಸಂವಾದ ಹಾಗೂ ಸಹಕಾರ ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ನಿವಾನೋ ದಿ ಬುದ್ಧ ಇನ್ ಎವೆರಿವನ್ಸ್ ಹಾರ್ಟ್ ಎಂಬ ಕೃತಿಯ ಲೇಖಕಿ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago