Featured

ಉಡುಪಿ:  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ್ ಮಲ್ಪೆ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ಹಸ್ತಾಂತರ – vishwanews24

ಉಡುಪಿ:  ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಈಶ್ವರ್ ಮಲ್ಪೆ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ಹಸ್ತಾಂತರ

ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪದ್ಭಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.

ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿ ಜೀವದ ಹಂಗು ತೊರೆದು ಉಚಿತವಾಗಿ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ.

 

ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕೊನೆಗೆ ಅವರನ್ನು ಅಧಿಕಾರಿಗಳು ಮತ್ತು ಸರ್ಕಾರ ಕಡೆಗಣನೆ ಮಾಡಿರುವುದು ಸಮಾಜದಲ್ಲಿ ತೀವ್ರ ಬೇಸರವನ್ನು ಉಂಟು ಮಾಡಿದೆ.

ಮನೆಯಲ್ಲಿ ಬಡತನವಿದ್ದರೂ ಮಾನವೀಯತೆಯಲ್ಲಿ ಅಗರ್ಭ ಶ್ರೀಮಂತರಾಗಿರುವ ಈಶ್ವರ್ ಮಲ್ಪೆಯವರ ಸೇವೆ ಇನ್ನಷ್ಟು ಬೇಕೆಂಬ ಹಂಬಲದಿಂದ ಪ್ರತಿಯೊಬ್ಬನೂ ಈಶ್ವರ್ ಮಲ್ಪೆಯವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಈಶ್ವರ್ ಮಲ್ಪೆಯವರಿಗೆ ಕೇವಲ ಶ್ಲಾಘನೆ ಸಾಕಾಗುವುದಿಲ್ಲ. ಸುಮಾರು 200 ರಷ್ಟು ಜೀವಗಳನ್ನು ನೀರಿನಿಂದ ಮೇಲೆತ್ತಿದ ಈ ಸಾಧಕನ ಹೆಸರಲ್ಲಿ ಸರ್ಕಾರ ‘ಅಪದ್ಭಾಂದವ ಈಶ್ವರ್ ಮಲ್ಪೆ ತುರ್ತು ಸೇವಾ ಘಟಕ’ ಸ್ಥಾಪಿಸಿ ಅದರ ಮೂಲಕ ರಾಜ್ಯದೆಲ್ಲೆಡೆ ತರಬೇತಿ ಪಡೆದ ಒಂದು ತುರ್ತು ಸೇವಾ ತಂಡ ರಚನೆಯಾಗು ವಂತೆ ಸರ್ಕಾರ ಇವರಿಗೆ ಸವಲತ್ತು ನೀಡಬೇಕು ಮತ್ತು ಈಶ್ವರ್ ಮಲ್ಪೆಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಡುವಂತೆ ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

13 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

13 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

13 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

14 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

14 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

16 hours ago