ಉಡುಪಿ: ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ, ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪದ್ಭಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.
ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿ ಜೀವದ ಹಂಗು ತೊರೆದು ಉಚಿತವಾಗಿ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ.
ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕೊನೆಗೆ ಅವರನ್ನು ಅಧಿಕಾರಿಗಳು ಮತ್ತು ಸರ್ಕಾರ ಕಡೆಗಣನೆ ಮಾಡಿರುವುದು ಸಮಾಜದಲ್ಲಿ ತೀವ್ರ ಬೇಸರವನ್ನು ಉಂಟು ಮಾಡಿದೆ.
ಮನೆಯಲ್ಲಿ ಬಡತನವಿದ್ದರೂ ಮಾನವೀಯತೆಯಲ್ಲಿ ಅಗರ್ಭ ಶ್ರೀಮಂತರಾಗಿರುವ ಈಶ್ವರ್ ಮಲ್ಪೆಯವರ ಸೇವೆ ಇನ್ನಷ್ಟು ಬೇಕೆಂಬ ಹಂಬಲದಿಂದ ಪ್ರತಿಯೊಬ್ಬನೂ ಈಶ್ವರ್ ಮಲ್ಪೆಯವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಈಶ್ವರ್ ಮಲ್ಪೆಯವರಿಗೆ ಕೇವಲ ಶ್ಲಾಘನೆ ಸಾಕಾಗುವುದಿಲ್ಲ. ಸುಮಾರು 200 ರಷ್ಟು ಜೀವಗಳನ್ನು ನೀರಿನಿಂದ ಮೇಲೆತ್ತಿದ ಈ ಸಾಧಕನ ಹೆಸರಲ್ಲಿ ಸರ್ಕಾರ ‘ಅಪದ್ಭಾಂದವ ಈಶ್ವರ್ ಮಲ್ಪೆ ತುರ್ತು ಸೇವಾ ಘಟಕ’ ಸ್ಥಾಪಿಸಿ ಅದರ ಮೂಲಕ ರಾಜ್ಯದೆಲ್ಲೆಡೆ ತರಬೇತಿ ಪಡೆದ ಒಂದು ತುರ್ತು ಸೇವಾ ತಂಡ ರಚನೆಯಾಗು ವಂತೆ ಸರ್ಕಾರ ಇವರಿಗೆ ಸವಲತ್ತು ನೀಡಬೇಕು ಮತ್ತು ಈಶ್ವರ್ ಮಲ್ಪೆಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಡುವಂತೆ ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…