ಉಡುಪಿ: ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಪುತ್ತೂರು (ದ.ಕ.) ಇಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪುನುಗು ಬೆಕ್ಕು ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಕುಂದಾಪುರ ವೆಸ್ಟ್ ಬ್ಲಾಕ್ ರಸ್ತೆ ದತ್ತಾತ್ರೇಯ ನಗರದ ನಿವಾಸಿ ಅಸ್ಗರ್ ಅಲಿ (22), ಹಾಗೂ ಬಿದ್ಕಲಕಟ್ಟೆ ನಿವಾಸಿ ಶರತ್ (23) ಬಂಧಿತ ಆರೋಪಿಗಳಾಗಿದ್ದು ಇವರಿಂದ ಜೀವಂತ ಪುನುಗು ಬೆಕ್ಕು, ಪಂಜರ, ಮಾರುತಿ ಇಕೋ ಕಾರು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರಿನ ಪೊಲೀಸ್ ಅರಣ್ಯ ಸಂಚಾರಿ ದಳದ (ಡಬ್ಲ್ಯೂ.ಎಲ್.ಪಿ) ಪೊಲೀಸ್ ಉಪನಿರೀಕ್ಷಕ ಜಯ ಕೆ. ಅವರು ಕಚೇರಿಯಲಿದ್ದ ವೇಳೆ ಜೀವಂತ ಪುನುಗು ಬೆಕ್ಕಣ್ಣು ಮಾರಾಟದ ಸಲುವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನ ಬಂದಿದ್ದು ಅದರಂತೆಯೇ ಸಿಬ್ಬಂದಿಗಳ ಜೊತೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಉದಯ್, ರಾಮಕೃಷ್ಣ ಮೊದಲಾದವರು ಇದ್ದರು. ಈ ಪ್ರಕರಣವು ವನ್ಯ ಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಪ್ರಕರಣವಾದ್ದರಿಂದ ಆರೋಪಿಗಳನ್ನು ಮತ್ತು ಸ್ವತ್ತುಗಳನ್ನು ಮುಂದಿನ ತನಿಖೆ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…