ಉಡುಪಿ: ಪುನುಗು ಬೆಕ್ಕನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಪುತ್ತೂರು (ದ.ಕ.) ಇಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಗಳು ಪುನುಗು ಬೆಕ್ಕು ಸಹಿತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ತಾಲೂಕಿನ ಹಿಲಿಯಾಣ ಗ್ರಾಮದ ಹೈಕಾಡಿ ಎಂಬಲ್ಲಿ ಈ ಘಟನೆ ನಡೆದಿದೆ.
ಕುಂದಾಪುರ ವೆಸ್ಟ್ ಬ್ಲಾಕ್ ರಸ್ತೆ ದತ್ತಾತ್ರೇಯ ನಗರದ ನಿವಾಸಿ ಅಸ್ಗರ್ ಅಲಿ (22), ಹಾಗೂ ಬಿದ್ಕಲಕಟ್ಟೆ ನಿವಾಸಿ ಶರತ್ (23) ಬಂಧಿತ ಆರೋಪಿಗಳಾಗಿದ್ದು ಇವರಿಂದ ಜೀವಂತ ಪುನುಗು ಬೆಕ್ಕು, ಪಂಜರ, ಮಾರುತಿ ಇಕೋ ಕಾರು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ.
ಪುತ್ತೂರಿನ ಪೊಲೀಸ್ ಅರಣ್ಯ ಸಂಚಾರಿ ದಳದ (ಡಬ್ಲ್ಯೂ.ಎಲ್.ಪಿ) ಪೊಲೀಸ್ ಉಪನಿರೀಕ್ಷಕ ಜಯ ಕೆ. ಅವರು ಕಚೇರಿಯಲಿದ್ದ ವೇಳೆ ಜೀವಂತ ಪುನುಗು ಬೆಕ್ಕಣ್ಣು ಮಾರಾಟದ ಸಲುವಾಗಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ವರ್ತಮಾನ ಬಂದಿದ್ದು ಅದರಂತೆಯೇ ಸಿಬ್ಬಂದಿಗಳ ಜೊತೆ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಸುಂದರ್ ಶೆಟ್ಟಿ, ಉದಯ್, ರಾಮಕೃಷ್ಣ ಮೊದಲಾದವರು ಇದ್ದರು. ಈ ಪ್ರಕರಣವು ವನ್ಯ ಜೀವಿ ಅರಣ್ಯ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಪ್ರಕರಣವಾದ್ದರಿಂದ ಆರೋಪಿಗಳನ್ನು ಮತ್ತು ಸ್ವತ್ತುಗಳನ್ನು ಮುಂದಿನ ತನಿಖೆ ಬಗ್ಗೆ ನ್ಯಾಯಾಲಯದ ಅನುಮತಿ ಪಡೆದು ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…