ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ನಡೆಯುತ್ತಿರುವ ಸರಣಿ ಪ್ರತಿಭಟನೆಯ ಪ್ರಯುಕ್ತ ನಗರದ ಸಿಟಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಧರ್ಮದ ಹೆಸರಿನಲ್ಲಿ ಬಿಜೆಪಿ ಪಕ್ಷವು ಜನರನ್ನು ವಿಭಜಿಸಿ ಕೆಲವರನ್ನು ಅಂಧ ಭಕ್ತರನ್ನಾಗಿಸಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ. ಪೆಟ್ರೋಲ್ ಮೂಲ ಬೆಲೆ 35 ರೂ ಉಳಿದ ರೂ 65 ಕೇಂದ್ರ ಮತ್ತು ರಾಜ್ಯ ಸರಕಾರಗಳ ತೆರಿಗೆಯನ್ನು ಜನರ ಮೇಲೆ ಹೇರುತ್ತಿದೆ. ಎಂದರು.
ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಲ್ಲಿ ಫೀಸ್ ಕಟ್ಟಲು ಒತ್ತಾಯಿಸುತ್ತಿದ್ದಾರೆ ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ಮಾರ್ಗದರ್ಶನ ನೀಡಬೇಕು. ಅಧಿಕಾರಕ್ಕೆ ಬರುವ ಮುನ್ನ ಬಡವ ಶ್ರೀಮಂತರೆನ್ನುವ ಭೇಧಭಾವ ಮಾಡದೇ ಆಡಳಿತ ನಡೆಸುವ ಭರವಸೆ ನೀಡಿದ್ದ ಬಿಜೆಪಿ ಈಗ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನಸಿ ಸಾಮಾಗ್ರಿಗಳ ಸತತ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ವಂಚಿಸಿ ವಚನ ಭ್ರಷ್ಟವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಯತೀಶ್ ಕರ್ಕೇರಾ, ಹಮದ್, ಶರತ್ ಶೆಟ್ಟಿ, ತಾರಾನಾಥ ಸುವರ್ಣ, ಶೇಖರ ಶೆಟ್ಟಿ, ಸುಹಾಸ್ ಶೇಟ್, ನವೀನ್ ಸುವರ್ಣ ಬನ್ನಂಜೆ, ಪ್ರಜ್ವಲ್ ಅಂಚನ್, ಪ್ರದೀಪ್ ಅಂಚನ್, ಗಣೇಶ್ ದೇವಾಡಿಗ, ಸಾಯಿರಾಜ್ ಕೋಟ್ಯಾನ್, ಪ್ರಶಾಂತ್ ಶಿರಿಬೀಡು ಹಾಗೂ ಇತರರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…