ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ನಡೆಯುತ್ತಿರುವ ಸರಣಿ ಪ್ರತಿಭಟನೆಯ ಪ್ರಯುಕ್ತ ನಗರದ ಸಿಟಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಧರ್ಮದ ಹೆಸರಿನಲ್ಲಿ ಬಿಜೆಪಿ ಪಕ್ಷವು ಜನರನ್ನು ವಿಭಜಿಸಿ ಕೆಲವರನ್ನು ಅಂಧ ಭಕ್ತರನ್ನಾಗಿಸಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ. ಪೆಟ್ರೋಲ್ ಮೂಲ ಬೆಲೆ 35 ರೂ ಉಳಿದ ರೂ 65 ಕೇಂದ್ರ ಮತ್ತು ರಾಜ್ಯ ಸರಕಾರಗಳ ತೆರಿಗೆಯನ್ನು ಜನರ ಮೇಲೆ ಹೇರುತ್ತಿದೆ. ಎಂದರು.
ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಲ್ಲಿ ಫೀಸ್ ಕಟ್ಟಲು ಒತ್ತಾಯಿಸುತ್ತಿದ್ದಾರೆ ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ಮಾರ್ಗದರ್ಶನ ನೀಡಬೇಕು. ಅಧಿಕಾರಕ್ಕೆ ಬರುವ ಮುನ್ನ ಬಡವ ಶ್ರೀಮಂತರೆನ್ನುವ ಭೇಧಭಾವ ಮಾಡದೇ ಆಡಳಿತ ನಡೆಸುವ ಭರವಸೆ ನೀಡಿದ್ದ ಬಿಜೆಪಿ ಈಗ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನಸಿ ಸಾಮಾಗ್ರಿಗಳ ಸತತ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ವಂಚಿಸಿ ವಚನ ಭ್ರಷ್ಟವಾಗಿದೆ ಎಂದರು.
ಪ್ರತಿಭಟನೆಯಲ್ಲಿ ಯತೀಶ್ ಕರ್ಕೇರಾ, ಹಮದ್, ಶರತ್ ಶೆಟ್ಟಿ, ತಾರಾನಾಥ ಸುವರ್ಣ, ಶೇಖರ ಶೆಟ್ಟಿ, ಸುಹಾಸ್ ಶೇಟ್, ನವೀನ್ ಸುವರ್ಣ ಬನ್ನಂಜೆ, ಪ್ರಜ್ವಲ್ ಅಂಚನ್, ಪ್ರದೀಪ್ ಅಂಚನ್, ಗಣೇಶ್ ದೇವಾಡಿಗ, ಸಾಯಿರಾಜ್ ಕೋಟ್ಯಾನ್, ಪ್ರಶಾಂತ್ ಶಿರಿಬೀಡು ಹಾಗೂ ಇತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…