Featured

ಉಡುಪಿ :  ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ : ಪ್ರಖ್ಯಾತ್ ಶೆಟ್ಟಿ -Vishwanews24

ಉಡುಪಿ :  ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ : ಪ್ರಖ್ಯಾತ್ ಶೆಟ್ಟಿ -Vishwanews24

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ತೈಲ ಬೆಲೆ ಏರಿಕೆ ವಿರೋಧಿಸಿ ನಡೆಯುತ್ತಿರುವ ಸರಣಿ ಪ್ರತಿಭಟನೆಯ ಪ್ರಯುಕ್ತ ನಗರದ ಸಿಟಿ ಬಸ್ ನಿಲ್ದಾಣದ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಮಾತನಾಡಿ ಧರ್ಮದ ಹೆಸರಿನಲ್ಲಿ ಬಿಜೆಪಿ ಪಕ್ಷವು ಜನರನ್ನು ವಿಭಜಿಸಿ ಕೆಲವರನ್ನು ಅಂಧ ಭಕ್ತರನ್ನಾಗಿಸಿ ಪೆಟ್ರೋಲ್ ಡಿಸೇಲ್ ಅಡುಗೆ ಅನಿಲ ದರ ಗಗನಕ್ಕೆರಿಸಿದರೂ ಭಕ್ತರು ಇನ್ನೂ ಮೋದಿ ಭಜನೆಯಲ್ಲಿದ್ದಾರೆ. ಪೆಟ್ರೋಲ್ ಮೂಲ ಬೆಲೆ 35 ರೂ ಉಳಿದ ರೂ 65 ಕೇಂದ್ರ ಮತ್ತು ರಾಜ್ಯ ಸರಕಾರಗಳ ತೆರಿಗೆಯನ್ನು ಜನರ ಮೇಲೆ ಹೇರುತ್ತಿದೆ. ಎಂದರು.

ಉಡುಪಿ ನಗರಸಭೆಯ ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಲ್ಲಿ ಫೀಸ್ ಕಟ್ಟಲು ಒತ್ತಾಯಿಸುತ್ತಿದ್ದಾರೆ ಈ ಬಗ್ಗೆ ರಾಜ್ಯ ಸರಕಾರ ಸೂಕ್ತ ಮಾರ್ಗದರ್ಶನ ನೀಡಬೇಕು. ಅಧಿಕಾರಕ್ಕೆ ಬರುವ ಮುನ್ನ ಬಡವ ಶ್ರೀಮಂತರೆನ್ನುವ ಭೇಧಭಾವ ಮಾಡದೇ ಆಡಳಿತ ನಡೆಸುವ ಭರವಸೆ ನೀಡಿದ್ದ ಬಿಜೆಪಿ ಈಗ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ, ದಿನಸಿ ಸಾಮಾಗ್ರಿಗಳ ಸತತ ಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ವಂಚಿಸಿ ವಚನ ಭ್ರಷ್ಟವಾಗಿದೆ ಎಂದರು.

ಪ್ರತಿಭಟನೆಯಲ್ಲಿ ಯತೀಶ್ ಕರ್ಕೇರಾ, ಹಮದ್, ಶರತ್ ಶೆಟ್ಟಿ, ತಾರಾನಾಥ ಸುವರ್ಣ, ಶೇಖರ ಶೆಟ್ಟಿ, ಸುಹಾಸ್ ಶೇಟ್, ನವೀನ್ ಸುವರ್ಣ ಬನ್ನಂಜೆ, ಪ್ರಜ್ವಲ್ ಅಂಚನ್, ಪ್ರದೀಪ್ ಅಂಚನ್, ಗಣೇಶ್ ದೇವಾಡಿಗ, ಸಾಯಿರಾಜ್ ಕೋಟ್ಯಾನ್, ಪ್ರಶಾಂತ್ ಶಿರಿಬೀಡು ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

50 minutes ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

1 hour ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

1 hour ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

2 hours ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

3 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

24 hours ago