ಉಡುಪಿ : ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ – Vishwanews24

Featured, ಉಡುಪಿ

ಉಡುಪಿ : ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ – Vishwanews24

 

ಉಡುಪಿ: ಪೆಟ್ರೋಲ್ ,ಡೀಸೆಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.ಸರ್ವಿಸ್ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗಿಯಾದರು. ಕೊರೋನಾ ಲಾಕ್ ಡೌನ್ ಸಂದರ್ಭದಲ್ಲೂ ಕೇಂದ್ರ ,ರಾಜ್ಯ ಸರಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿವೆ. ಸತತ ಬೆಲೆ ಏರಿಸುವ ಮೂಲಕ ಜನರ ಬದುಕಿನ ಮೇರೆ ಬರೆ ಎಳೆಯುತ್ತಿವೆ.ಯುಪಿಎ ಸರಕಾರ ಇದ್ದಾಗ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು,ಈಗ ಇಂಧನ ,ದಿನಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆಯಾಗುತ್ತಿದ್ದರೂ ಮೌನಕ್ಕೆ ಶರಣಾಗಿದ್ದಾರೆ ಎಂದು ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದರು.ಸಾಮಾಜಿಕ ಅಂತರ ಕಾಪಾಡಿ , ಮಾಸ್ಕ್ ಧರಿಸಿ ಪ್ರತಿಭಟನೆ ನಡೆಯಿತು.ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಿತ ಜಿಲ್ಲಾ ಮುಖಂಡರು ಇದರಲ್ಲಿ ಭಾಗಿಯಾದರು.