ಉಡುಪಿ: ತುಳುಕೂಟ ಉಡುಪಿ (ರಿ.) ವತಿಯಿಂದ ನೀಡಲಾಗುವ ೨೦೨೦-೨೦೨೧ನೇ ಸಾಲಿನ ಪ್ರತಿಷ್ಠಿತ ಎಸ್.ಯು.ಪಣಿಯಾಡಿ ಸ್ಮಾರಕ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಗೆ ಮಂಗಳೂರು ಸಹ್ಯಾದ್ರಿ ಇಂಜಿನಿಯರ್ ಹಾಗೂ ಮ್ಯಾನೇಜ್ಮೆಂಟ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ, ಪೆರಾರ ಮುಂಡಬೆಟ್ಟುಗುತ್ತು ಅಕ್ಷಯ ಆರ್.ಶೆಟ್ಟಿ ಅವರ ದೆಂಗ ಕಾದಂಬರಿ ಆಯ್ಕೆಯಾಗಿದೆ.
ತುಳು ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಹಿರಿಯ ಸಾಹಿತಿ ದಿ.ಎಸ್.ಯು.ಪಣಿಯಾಡಿ ಅವರು ಸ್ವಾತಂತ್ರö್ಯ ಹೋರಾಟಗಾರ ರಾಗಿಯೂ ಗುರುತಿಸಿಕೊಂಡವರು. ಇವರ ಸವಿನೆನಪಿಗಾಗಿ ಉಡುಪಿ ತುಳುಕೂಟವು ಕಳೆದ ೨೭ ವರ್ಷಗಳಿಂದ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ, ಕೃತಿ ಬಿಡುಗಡೆ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸುತ್ತಾ ಬಂದಿದೆ. ಈ ಮೂಲಕ ತುಳು ಸಾಹಿತ್ಯ ಕ್ಷೇತ್ರಕ್ಕೆ ಅನೇಕ ಯುವ ಕಾದಂಬರಿಕಾರರÀನ್ನು ಪರಿಚಯಿಸಲಾಗಿದೆ. ಮಾತ್ರವಲ್ಲದೆ ಪ್ರಶಸ್ತಿ ವಿಜೇತ ೩೩ ತುಳು ಕಾದಂಬರಿಗಳನ್ನು ಉಡುಪಿ ತುಳುಕೂಟ ಪ್ರಕಟಿಸುವ ಮೂಲಕ ತುಳು ಭಾಷಾ ಕೃತಿಗಳ ಬೆಳೆವಣಿಗೆಗೆ ವಿಶೇಷ ಕೊಡುಗೆ ನೀಡಿದೆೆ.
ತುಳುಕೂಟ ಉಡುಪಿ (ರಿ.) ಇದರ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನೂತನ ದೆಂಗ ತುಳು ಕಾದಂಬರಿ ಕೃತಿ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಕಾದಂಬರಿ ಸ್ಪರ್ಧೆಗೆ ವಿವಿದೆಢೆಗಳಿಂದ ಒಟ್ಟು ಏಳು ಹಸ್ತಪ್ರತಿಗಳು ಬಂದಿದ್ದು, ಸ್ಪರ್ಧೆಯ ತೀರ್ಪುಗಾರರಾಗಿ ವಿಮರ್ಶಕ ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ, ಜಾನಕಿ ಬ್ರಹ್ಮಾವರ, ಸಕು ಪಾಂಗಾಳ, ಉಪನ್ಯಾಸಕಿ ಡಾ.ನಿಕೇತನ ಸಹಕರಿಸಿದ್ದರು ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಕಾದಂಬರಿ ಪ್ರಶಸ್ತಿ ಸಂಚಾಲಕಿ ತಾರಾ ಉಮೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಿದಿಯೂರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…