ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಶ್ರೀಶಕ್ತಿ ಸಂಘದ ಮುಖ್ಯ ಬರಹಗಾರರೊಬ್ಬರು ಸಂಘದ ಲಕ್ಷಾಂತರ ರೂ. ಹಣವನ್ನು ದುರುಪಯೋಗ ಪಡಿಸಿ ವಂಚಿಸಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘದ ಮುಖ್ಯ ಬರಹಗಾರರಾದ ಸುಗಂಧಿ ಎಂಬವರು 2023ನೇ ಸಾಲಿನಿಂದ 2025 ಡಿಸೆಂಬರ್ ತಿಂಗಳ ನಡು ವಿನ ಅವಧಿಯಲ್ಲಿ ವಿವಿಧ ಶ್ರೀಶಕ್ತಿ ಸಂಘಗಳ ಸದಸ್ಯರಿಗೆ ನೀಡಿದ ಸಾಲ, ಸದಸ್ಯರು ಮರು ಪಾವತಿಸಲು ಮಾಡಿದ ಹಣವನ್ನು ಸಂಘದ ಜಮಾ ಪುಸ್ತಕದಲ್ಲಿ ಸಂಬಂಧಿಸಿದ ಖಾತೆಗೆ ಜಮಾ ಮಾಡದೆ ತನ್ನ ಸ್ವಂತಕ್ಕೆ ಬಳಸಿಕೊಂಡಿದ್ದರು. ಅಲ್ಲದೆ ಕೆಲ ಸದಸ್ಯರ ಬೇಡಿಕೆ ಮೊತ್ತಕ್ಕಿಂತ ಹೆಚ್ಚಿನ ಮೊತ್ತ ನಮೂದಿಸಿ ಅಧ್ಯಕ್ಷರು ಕಾರ್ಯದರ್ಶಿ ಯವರ ನಕಲಿ ಸಹಿ ಮಾಡಿ ನಕಲಿ ದಾಖಲೆ ಸೃಷ್ಠಿಸಿ ಬ್ಯಾಂಕಿಗೆ ಸಲ್ಲಿಸಿ ಸಾಲ ಮಂಜೂರಿಸಿಕೊಂಡಿದ್ದಾರೆ.
ಬೇಡಿಕೆ ಇದ್ದಷ್ಟು ಹಣವನ್ನು ಸದಸ್ಯರಿಗೆ ನೀಡಿ ಉಳಿದ ಹಣವನ್ನು ತನ್ನ ಸ್ವಂತಕ್ಕೆ ಬಳಿಸಿಕೊಂಡಿದಲ್ಲದೆ ಕಾರ್ಯಕಾರಿ ಸಮಿತಿಗೆ ತೋರಿಸಲೆಂದು ಪ್ರತ್ಯೇಕ ಪುಸ್ತಕವನ್ನು ಹಾಗೂ ವ್ಯವಹಾರಕ್ಕೆ ಪ್ರತ್ಯೇಕ ಪುಸ್ತಕ ನಿರ್ವಹಿಸುತ್ತಾ ವಿವಿಧ ಸಂಘಗಳಲ್ಲಿ ಒಟ್ಟು 23,00,000ರೂ. ಹಣವನ್ನು ದುರುಪಯೋಗ ಮಾಡಿ ವಂಚಿಸಿರುವುದಾಗಿ ದೂರಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…