Featured

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ – Vishwanews24

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪೇಜಾವರ ಶ್ರೀ ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ..

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದರು.

ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ ಆದರೆ ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು.

ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದರು.

ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ, ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ ಆದರೆ ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದರು.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..’ ಎಂದು ಹೇಳಿದ್ದರು.

‘ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ. ದಲಿತರ ಮನೆಗೆ ಬಲಿತರು ಹೋಗುವುದು ಅದೇನು ದೊಡ್ಡ ವಿಷಯವೇ..? ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

5 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

5 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

7 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

7 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

7 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

8 hours ago