Featured

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ – Vishwanews24

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು : ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪೇಜಾವರ ಶ್ರೀ ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ..

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ ಹಂಸಲೇಖ ಅವರಿಗೆ ಇದರಿಂದ ಪ್ರಚಾರ ಬೇಕಾಗಿರಲಿಲ್ಲ ಎಂದರು.

ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ ಆದರೆ ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು.

ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದರು.

ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ, ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ ಆದರೆ ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದರು.

ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..’ ಎಂದು ಹೇಳಿದ್ದರು.

‘ಬಿಳಿಗಿರಿ ರಂಗಯ್ಯ ಸೋಲಿಗರ ಮನೆಯ ಹೆಣ್ಣಿನೊಂದಿಗೆ ರಮಿಸಿದರೆ, ಅದರಲ್ಲಿ ಏನ್ ದೊಡ್ಡ ವಿಷ್ಯ ಇದೆ? ಅದೇ ಸೋಲಿಗರ ಹೆಣ್ಣು ಮಗಳನ್ನು ಕರೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿ ಇಟ್ಟು ಗೌರವಿಸಿದ್ದರೆ, ಅದು ಬಿಳಿಗಿರಿ ರಂಗಯ್ಯನ ತಾಕತ್ತು. ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಸೋಲಿಗರ ಮನೆಗೆ ಬಂದು ಆ ಹೆಣ್ಣು ಮಗಳೊಂದಿಗೆ ಬಿಳಿಗಿರಿ ರಂಗಯ್ಯ ಸಂಸಾರ ನಡೆಸಿ ಬೆಳಕು ಹರಿಯುವುದರೊಳಗೆ ಹೋಗಿ ಕಲ್ಲಾಗುತ್ತಾನಂತೆ! ಅದೇನು ದೊಡ್ಡ ವಿಷಯ, ಅದೊಂದು ನಾಟಕ, ಬೂಟಾಟಿಕೆ. ದಲಿತರ ಮನೆಗೆ ಬಲಿತರು ಹೋಗುವುದು ಅದೇನು ದೊಡ್ಡ ವಿಷಯವೇ..? ದಲಿತರನ್ನು ಬಲಿತರು ತಮ್ಮ ಮನೆಗಳಿಗೆ ಕರೆದುಕೊಂಡು ಹೋಗಬೇಕು. ಅವರ ಮನೆಯಲ್ಲಿ ಊಟ ಹಾಕಬೇಕು, ದಲಿತರ ಮುಟ್ಟಿದ ಲೋಟಗಳನ್ನು ನಾವು ತೊಳೆಯುತ್ತೀವಿ ಎಂದು ಬಲಿತರು ಹೇಳಬೇಕು’ ಎಂದು ಹಂಸಲೇಖ ಹೇಳಿದ್ದರು.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

8 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

8 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

10 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

11 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

11 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

11 hours ago