Featured

ಉಡುಪಿ : ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ – ಪೆರ್ಣಂಕಿಲ ಶ್ರೀಶ ನಾಯಕ್ – vishwanews24

ಉಡುಪಿ : ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ – ಪೆರ್ಣಂಕಿಲ ಶ್ರೀಶ ನಾಯಕ್

ಅವಹೇಳನ ಮಾಡಿದವರ ಮೇಲೆ ಪೊಲೀಸರು ಸುಮುಟೋ ಕೇಸು ದಾಖಲಿಸಿ

ಉಡುಪಿ : ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಅವಹೇಳನ ಮಾಡುವ ಘಟನೆಗಳು ನಡೆಯುತ್ತಿರುವ ಅತ್ಯಂತ ಖಂಡನೀಯವಾಗಿದೆ.

ಉಡುಪಿಯ ಅಷ್ಟ ಮಠಗಳ ಯತಿಗಳ ಪರಂಪರೆಯಲ್ಲಿ ಯಾರೂ ಸಂವಿಧಾನದ ವಿರುದ್ಧ ಮಾತನಾಡಿದ ಉದಾಹರಣೆಗಳಿಲ್ಲ, ಅದರಲ್ಲೂ ಪೇಜಾವರ ಮಠದ ಹಿರಿಯರಾಗಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಂತೂ ಸಂವಿಧಾನದ ಮೇಲೆ ವಿಶೇಷ ಗೌರವವನ್ನು ಹೊಂದಿದ್ದರು, ಕಿರಿಯ ಶ್ರೀಗಳು ಕೂಡ ಅದನ್ನೆ ಪಾಲಿಸುತಿದ್ದಾರೆ ಹಾಗೂ ಇತರರೂ ಪಾಲಿಸುವಂತೆ ಹೇಳುತಿದ್ದರು.

ಅವರ ಶಿಷ್ಯೋತ್ತಮರಾದ ಶ್ರೀ ವಿಶ್ವಪ್ರಸನ್ನ ತೀರ್ಥರೂ ಈ ದೇಶದ ಸಂವಿಧಾನಕ್ಕನುಗುಣವಾಗಿ, ಸಂವಿಧಾನದ ಆಶಯದಂತೆ ಸಮಾಜೋದ್ಧಾರಕ್ಕಾಗಿ ಶ್ರಮಿಸುತಿದ್ದಾರೆ. ಆಯೋಧ್ಯೆ ಶ್ರೀ ರಾಮಮಂದಿರ ನಿರ್ಮಾಣದಲ್ಲಿನ ಶ್ರಮ, ಅಸಂಖ್ಯ ಗೋವುಗಳ ಸೇವೆ, ದಲಿತರಿಗೆ ಭಕ್ತಿ ಮಾರ್ಗದರ್ಶನ, ಅಶಕ್ತರಿಗೆ ಮನೆ ನಿರ್ಮಾಣ, ನಕ್ಸಲ್ ಪೀಡಿತ ಪ್ರದೇಶಗಳ ಜನರಿಗೆ ಸಾಂತ್ವಾನ, ಮಠಮಂದಿರಗಳ ಜೀರ್ಣೋದ್ಧಾರ ಇತ್ಯಾದಿ ಸತತ ಮತ್ತು ನಿರಂತರ ಯಶಸ್ವಿ ಸಾಧನೆಗಳನ್ನು ಸಹಿಸದ ಕೆಲವು ಫಡಪೋಶಿಗಳು ವಿಜಯಪುರದಲ್ಲಿ ಶ್ರೀಗಳ ವಿರುದ್ಧ ತೀರಾ ಅಸಂವಿಧಾನಿಕ, ಅಸಂಸದೀಯ, ಕಾನೂನು ಉಲ್ಲಂಘಿತ ಪದಗಳನ್ನು ಬಳಸಿ ಮಾತನಾಡಿರುವುದನ್ನು ಅವರ ಭಕ್ತಕೋಟಿ ಎಂದೂ ಸಹಿಸುವುದಿಲ್ಲ.

ಮನುಷ್ಯನ ಘನತೆಯನ್ನೇ ಅವಹೇಳನ ಮಾಡುವ ಇಂತಹ ಪದಗಳ ಬಳಕೆಯನ್ನು ಡಾ.ಬಿ.ಆರ್.ಅಂಬೇಡ್ಕರ್ ಇದ್ದಿದ್ದರೇ ಉಗ್ರವಾಗಿ ವಿರೋಧಿಸುತಿದ್ದರು, ಆದರೇ ಅವರ ಅನುಯಾಯಿಗಳು ಎಂದು ಹೇಳಿಕೊಳ್ಳುವವರು ಆಡಿರುವ ಈ ಅಸಂವಿಧಾನಿಕ ಪದಗಳು ಈ ದೇಶದ ಸಂವಿಧಾನವನ್ನು ರೂಪಿಸಿದ ಅಂಬೇಡ್ಕರ್ ಅವರಿಗೆ ಮಾಡಿರುವ ಘೋರ ಅವಮಾನವಲ್ಲದೇ ಬೇರೆನೂ ಅಲ್ಲ.

ಪೇಜಾವರ ಶ್ರೀಗಳು ತಾವು ಸಂವಿಧಾನದ ವಿರುದ್ಧ ಮಾತನಾಡಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ, ಆದರೂ ತುಚ್ಛವಾಗಿ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಸಮಸ್ತ ಹಿಂದೂ ಸಮಾಜ ಸಹಿಸುವುದಿಲ್ಲ.

ಆದ್ದರಿಂದ ಇನ್ನು ಮುಂದೆ ಪೇಜಾವರ ಶ್ರೀಗಳ ವಿರುದ್ಧವಾಗಲೀ ಹಿಂದೂ ಧರ್ಮದ ವಿರುದ್ಧವಾಗಲಿ ಸುಳ್ಳು ಆರೋಪಗಳನ್ನು ಹೊರಿಸುವುದಾಗಲಿ ಅವಹೇಳನ ಮಾಡುವುದಾಗಿ ಮಾಡಿದರೇ ಶ್ರೀಗಳ ಅಭಿಮಾನಿಗಳು ಸುಮ್ಮನಿರುವುದಿಲ್ಲ .

ಹಿಂದೂ ನಾಯಕ ಮೇಲೆ ಇಲ್ಲಸಲ್ಲದ ಕಾರಣಗಳಿಗೆ ಸುಮೋಟೋ ಕೇಸು ಹಾಕುವ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಉಡುಪಿ ಎಸ್ಪಿ ಅವರು, ಪೇಜಾವರ ಶ್ರೀಗಳ ವಿರುದ್ಧ ಸಾರ್ವಜನಿಕವಾಗಿ ಶಾಂತಿಭಂಗವಾಗುವ ರೀತಿಯಲ್ಲಿ ಬೆದರಿಕೆ ರೀತಿಯಲ್ಲಿ ಮಾತುಗಳನ್ನಾಡುವವರ ಮೇಲೆಯೂ ಸುಮೋಟೋ ಕೇಸು ದಾಖಲಿಸಿ ತಮ್ಮ ಸಂವಿಧಾನಬದ್ದತೆಯನ್ನು ತೋರಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

9 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

13 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

15 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

16 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

17 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

17 hours ago