Featured

ಉಡುಪಿ: ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ : ವಿಶ್ವ ಹಿಂದೂ ಪರಿಷತ್ – vishwanews24

ಉಡುಪಿ: ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ : ವಿಶ್ವ ಹಿಂದೂ ಪರಿಷತ್

ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಿತ ಇತರರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂಬಿ ಪುರಾಣಿಕ್ ಹೇಳಿದರು.

ಉಡುಪಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.23 ರಂದು ಬೆಂಗಳೂರಿನ ವಿವಿ ಪುರಂನಲ್ಲಿರುವ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50 ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ಆಡಿರುವ ಮಾತನ್ನು ತಿರುಚಿ ಪತ್ರಿಕೆಗಳು ಪ್ರಕಟಿಸಿವೆ. ಈ ಮೂಲಕ ಸಮಾಜ ಸ್ವಾಸ್ಥ್ಯವನ್ನು ಕೆಡಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದರು.

ಅಲ್ಲದೇ ಭೀಮ್ ಆರ್ಮಿ ಏಕತಾ ಮಿಷನ್ ಕರ್ನಾಟಕ ವತಿಯಿಂದ ವಿಜಯಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮತೀನ್ ಕುಮಾರ್, ಪರಶುರಾಮ್, ಹುಸೇನಪ್ಪ ಛಲವಾದಿ, ಸಂತೋಷ್ ಟಕ್ಕೆ, ಆಶಾ ಹೊಣೇರಿ, ಖಾಯಮ್ ಚೌದ್ರಿ ಪೇಜಾವರ ಮಠದ ಯತಿಗಳ ಬಗ್ಗೆ ತುಚ್ಚವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ. ಶ್ರೀಗಳ ತೇಜೊವಧೆ ನಡೆಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಉಡುಪಿ ಜಿಲ್ಲಾ ಎಸ್ಪಿಯವರಿಗೆ ಮನವಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಹಿಂಪ ಪ್ರಾಂತ ಕಾರ್ಯದರ್ಶಿ ಜಗನ್ನಾಥ್ ಶಾಸ್ತ್ರಿ, ಸಹಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಮುಖರಾದ ಪ್ರೇಮಾನಂದ್ ಶೆಟ್ಟಿ, ಬಸವರಾಜ್ ಉಪಸ್ಥಿತರಿದ್ದರು.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

17 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

27 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

45 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

49 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

57 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago