ಉಡುಪಿ : ಪೊಲೀಸರ ಮೇಲೆ ಕಲ್ಲೆಸೆಯುತ್ತಾರೆ ಅಂದರೆ ಭಯ ಇಲ್ಲ ಅಂತಾಯ್ತು : ಸರ್ಕಾರದ ವಿರುದ್ಧ ಪೇಜಾವರ ಶ್ರೀ ಆಕ್ರೋಶ – Vishwanews24

Featured, ಉಡುಪಿ

ಉಡುಪಿ : ಪೊಲೀಸರ ಮೇಲೆ ಹಲ್ಲೆಯಾದರೂ ಸರ್ಕಾರ ಏನು ಮಾಡುತ್ತಿದೆ? : ಪೇಜಾವರ ಶ್ರೀ ಆಕ್ರೋಶ

ಉಡುಪಿ : ನಿನ್ನೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಿಡಿಗೇಡಿಗಳು ಮನೆಗಳ ಮೇಲೆ ಕಲ್ಲುತೂರಾಟ ಹಾಗೂ ಪೊಲೀಸರು ಹಾಗೂ ಜನರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿಯ ವಿಶ್ವಪ್ರಸನ್ನತೀರ್ಥ ಸ್ವಾಮಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಬಾರಿ ಅಶಾಂತಿ ಸೃಷ್ಟಿ ಆದರೆ ಅದಕ್ಕೆ ಕೊನೆಯೇ ಇರುವುದಿಲ್ಲ. ಅದರಿಂದ ಕಾನೂನನ್ನು ಯಾರು ಕೈಗೆತ್ತಿಕೊಳ್ಳಬಾರದು. ಪೊಲೀಸರ ಮೇಲೆ ಹಲ್ಲೆಯಾದರೂ ಸರ್ಕಾರ ಏನು ಮಾಡುತ್ತಿದೆ? ಪೊಲೀಸರ ಮೇಲೆ ಕಲ್ಲೆಸೆಸುತ್ತಾರೆ ಅಂದರೆ ಭಯ ಇಲ್ಲ ಅಂತಾಯ್ತು ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಂದಾಪುರ: ಅಪರಿಚಿತನಿಂದ ವ್ಯಕ್ತಿಗೆ ಚೂರಿ ಇರಿತ – ಪ್ರಕರಣ ದಾಖಲು – Vishwanews24

ನಿನ್ನೆ ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದಾರೆ. ಯಾರೋ ಕಿಡಿಗೇಡಿಗಳು ಮನೆಗಳು ಮತ್ತು ಪೊಲಿಸರ ಮೇಲೆ ಕಲ್ಲು ಎಸೆದಿದ್ದರು.ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಕುಂದಾಪುರ: ಅಪರಿಚಿತನಿಂದ ವ್ಯಕ್ತಿಗೆ ಚೂರಿ ಇರಿತ – ಪ್ರಕರಣ ದಾಖಲು – Vishwanews24

Leave a Reply