ಉಡುಪಿ: ಪೊಲೀಸ್ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ.
ವಿದ್ಯಾ ಅವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್ಟೆಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ನಿಮ್ಮ ಆಧಾರ್ ನಂಬರು ಬಳಸಿ ಮುಂಬಯಿಯಲ್ಲಿ ಯಾರೋ ಸಿಮ್ ಖರೀದಿ ಮಾಡಿ ಅದರಲ್ಲಿ ಸ್ಕ್ಯಾಮ್ ಮೆಸೇಜ್ ಮತ್ತು ಟ್ರೇಡಿಂಗ್ ಮೆಸೇಜ್ ಕಳುಹಿಸುತ್ತಿದ್ದು ನಿಮ್ಮ ಎಲ್ಲ ಮೊಬೈಲ್ ನಂಬರ್ ಬ್ಲಾಕ್ ಮಾಡಲಾಗುವುದು ಎಂದು ಹೇಳಿದ. ಬಳಿಕ ಕರೆಯನ್ನು ಸಹರಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿದ.
ಬಳಿಕ ಅತ್ತ ಕಡೆಯಿಂದ ಮೋಹನ್ ಕುಮಾರ್ ಎಂಬಾತ ಮಾತನಾಡಿ, ತಾನು ಸಹರಾ ಪೊಲೀಸ್ ಠಾಣೆಯ ತನಿಖಾಧಿಕಾರಿ ಎಂದು ತಿಳಿಸಿ ನಿಮ್ಮ ಆಧಾರ್ ಕಾರ್ಡ್ನ ಮುಖಾಂತರ ಮುಂಬಯಿ ಎಸ್ಬಿಐ ಬ್ಯಾಂಕ್ನಲ್ಲಿ ಖಾತೆ ತೆರೆದಿದ್ದು ಈ ಖಾತೆಯನ್ನು ವಿವೇಕ್ದಾಸ್ ಎಂಬವರು ಆಪರೇಟ್ ಮಾಡಿ ಸದರಿ ಖಾತೆಗೆ ಹ್ಯುಮೆನ್ ಟ್ರಾಫಿಕಿಂಗ್ ಮತ್ತು ಮನಿ ಲ್ಯಾಡ್ರಿಂಗ್ ಮುಖಾಂತರ ಹಣ ವರ್ಗಾವಣೆ ಮಾಡಿರುತ್ತಾರೆ. ಖಾತೆ ನಿಮ್ಮ ಹೆಸರಿನಲ್ಲಿ ಇರುವುದರಿಂದ ನಿಮ್ಮ ಎಲ್ಲ ಅಕೌಂಟ್ ಪರಿಶೀಲನೆ ಮಾಡಬೇಕಾಗಿದೆ ಎಂದು ನಂಬಿಸಿದ್ದಾನೆ.
ಬಂಧಿಸುವುದಾಗಿ ಬೆದರಿಕೆ
ತದನಂತರ ಮೋಹನ್ ಕುಮಾರ್ ಪೊಲೀಸ್ ಅಧಿಕಾರಿ ಎಂಬುದಾಗಿ ಹೇಳಿಕೊಂಡು ವಿದ್ಯಾ ಅವರಿಗೆ ಕರೆ ಮಾಡಿ ನೀವು ಕೂಡ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುವಿರಿ, ಎಲ್ಲಿಗೂ ಹೋಗುವಂತಿಲ್ಲ, ಎಲ್ಲಿಗೆ ಹೋಗುವುದಿದ್ದರೂ ನಮಗೆ ತಿಳಿಸಬೇಕು ಎಂದು ಬೆದರಿಸಿ ನಿಮ್ಮ ಎಲ್ಲ ಅಕೌಂಟ್ ಸೀಜ್ ಆಗುತ್ತದೆ. ಆದ್ದರಿಂದ ನಿಮ್ಮ ಅಕೌಂಟ್ನಲ್ಲಿರುವ ಎಲ್ಲ ಹಣವನ್ನು ನಾನು ಹೇಳಿದ ಯುಪಿಐ ನಂಬರಿಗೆ ಹಾಗೂ ಬ್ಯಾಂಕ್ ಖಾತೆಗೆ ಕಳುಹಿಸಿ ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ವಿದ್ಯಾ ಅ. 16ರಿಂದ ನ. 7ರ ವರೆಗೆ ಹಂತ ಹಂತವಾಗಿ 19,71,679 ರೂ.ಗಳನ್ನು ವರ್ಗಾಯಿಸಿ, ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ. ಘಟನೆ ಸಂಬಂಧ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…