Featured

ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು – vishwanews24

ಉಡುಪಿ: ಪೊಲೀಸರ ಹೆಸರಿನಲ್ಲಿ ಮಹಿಳೆಗೆ ಹೆದರಿಸಿ ಲಕ್ಷಾಂತರ ರೂ ವಂಚನೆ: ಪ್ರಕರಣ ದಾಖಲು

ಉಡುಪಿ: ಪೊಲೀಸ್‌ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ.

ವಿದ್ಯಾ ಅವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್‌ಟೆಲ್‌ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ನಿಮ್ಮ ಆಧಾರ್‌ ನಂಬರು ಬಳಸಿ ಮುಂಬಯಿಯಲ್ಲಿ ಯಾರೋ ಸಿಮ್‌ ಖರೀದಿ ಮಾಡಿ ಅದರಲ್ಲಿ ಸ್ಕ್ಯಾಮ್‌ ಮೆಸೇಜ್‌ ಮತ್ತು ಟ್ರೇಡಿಂಗ್‌ ಮೆಸೇಜ್‌ ಕಳುಹಿಸುತ್ತಿದ್ದು ನಿಮ್ಮ ಎಲ್ಲ ಮೊಬೈಲ್‌ ನಂಬರ್‌ ಬ್ಲಾಕ್‌ ಮಾಡಲಾಗುವುದು ಎಂದು ಹೇಳಿದ. ಬಳಿಕ ಕರೆಯನ್ನು ಸಹರಾ ಪೊಲೀಸ್‌ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿದ.

ಬಳಿಕ ಅತ್ತ ಕಡೆಯಿಂದ ಮೋಹನ್‌ ಕುಮಾರ್‌ ಎಂಬಾತ ಮಾತನಾಡಿ, ತಾನು ಸಹರಾ ಪೊಲೀಸ್‌ ಠಾಣೆಯ ತನಿಖಾಧಿಕಾರಿ ಎಂದು ತಿಳಿಸಿ ನಿಮ್ಮ ಆಧಾರ್‌ ಕಾರ್ಡ್‌ನ ಮುಖಾಂತರ ಮುಂಬಯಿ ಎಸ್‌ಬಿಐ ಬ್ಯಾಂಕ್‌ನಲ್ಲಿ ಖಾತೆ ತೆರೆದಿದ್ದು ಈ ಖಾತೆಯನ್ನು ವಿವೇಕ್‌ದಾಸ್‌ ಎಂಬವರು ಆಪರೇಟ್‌ ಮಾಡಿ ಸದರಿ ಖಾತೆಗೆ ಹ್ಯುಮೆನ್‌ ಟ್ರಾಫಿಕಿಂಗ್‌ ಮತ್ತು ಮನಿ ಲ್ಯಾಡ್ರಿಂಗ್‌ ಮುಖಾಂತರ ಹಣ ವರ್ಗಾವಣೆ ಮಾಡಿರುತ್ತಾರೆ. ಖಾತೆ ನಿಮ್ಮ ಹೆಸರಿನಲ್ಲಿ ಇರುವುದರಿಂದ ನಿಮ್ಮ ಎಲ್ಲ ಅಕೌಂಟ್‌ ಪರಿಶೀಲನೆ ಮಾಡಬೇಕಾಗಿದೆ ಎಂದು ನಂಬಿಸಿದ್ದಾನೆ.

ಬಂಧಿಸುವುದಾಗಿ ಬೆದರಿಕೆ
ತದನಂತರ ಮೋಹನ್‌ ಕುಮಾರ್‌ ಪೊಲೀಸ್‌ ಅಧಿಕಾರಿ ಎಂಬುದಾಗಿ ಹೇಳಿಕೊಂಡು ವಿದ್ಯಾ ಅವರಿಗೆ ಕರೆ ಮಾಡಿ ನೀವು ಕೂಡ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುವಿರಿ, ಎಲ್ಲಿಗೂ ಹೋಗುವಂತಿಲ್ಲ, ಎಲ್ಲಿಗೆ ಹೋಗುವುದಿದ್ದರೂ ನಮಗೆ ತಿಳಿಸಬೇಕು ಎಂದು ಬೆದರಿಸಿ ನಿಮ್ಮ ಎಲ್ಲ ಅಕೌಂಟ್‌ ಸೀಜ್‌ ಆಗುತ್ತದೆ. ಆದ್ದರಿಂದ ನಿಮ್ಮ ಅಕೌಂಟ್‌ನಲ್ಲಿರುವ ಎಲ್ಲ ಹಣವನ್ನು ನಾನು ಹೇಳಿದ ಯುಪಿಐ ನಂಬರಿಗೆ ಹಾಗೂ ಬ್ಯಾಂಕ್‌ ಖಾತೆಗೆ ಕಳುಹಿಸಿ ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ವಿದ್ಯಾ ಅ. 16ರಿಂದ ನ. 7ರ ವರೆಗೆ ಹಂತ ಹಂತವಾಗಿ 19,71,679 ರೂ.ಗಳನ್ನು ವರ್ಗಾಯಿಸಿ, ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ. ಘಟನೆ ಸಂಬಂಧ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago