ಉಡುಪಿ: ಪೊಲೀಸ್ ತನಿಖಾಧಿಕಾರಿಯೆಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ.ಗಳನ್ನು ಲಪಟಾಯಿಸಿದ ಘಟನೆ ನಡೆದಿದೆ.
ವಿದ್ಯಾ ಅವರಿಗೆ ಅಪರಿಚಿತ ವ್ಯಕಿಯೋರ್ವ ಕರೆ ಮಾಡಿ ಏರ್ಟೆಲ್ ಕಂಪೆನಿಯಿಂದ ಮಾತನಾಡುತ್ತಿರುವುದಾಗಿ ತಿಳಿಸಿದ್ದ. ನಿಮ್ಮ ಆಧಾರ್ ನಂಬರು ಬಳಸಿ ಮುಂಬಯಿಯಲ್ಲಿ ಯಾರೋ ಸಿಮ್ ಖರೀದಿ ಮಾಡಿ ಅದರಲ್ಲಿ ಸ್ಕ್ಯಾಮ್ ಮೆಸೇಜ್ ಮತ್ತು ಟ್ರೇಡಿಂಗ್ ಮೆಸೇಜ್ ಕಳುಹಿಸುತ್ತಿದ್ದು ನಿಮ್ಮ ಎಲ್ಲ ಮೊಬೈಲ್ ನಂಬರ್ ಬ್ಲಾಕ್ ಮಾಡಲಾಗುವುದು ಎಂದು ಹೇಳಿದ. ಬಳಿಕ ಕರೆಯನ್ನು ಸಹರಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿದ.
ಬಳಿಕ ಅತ್ತ ಕಡೆಯಿಂದ ಮೋಹನ್ ಕುಮಾರ್ ಎಂಬಾತ ಮಾತನಾಡಿ, ತಾನು ಸಹರಾ ಪೊಲೀಸ್ ಠಾಣೆಯ ತನಿಖಾಧಿಕಾರಿ ಎಂದು ತಿಳಿಸಿ ನಿಮ್ಮ ಆಧಾರ್ ಕಾರ್ಡ್ನ ಮುಖಾಂತರ ಮುಂಬಯಿ ಎಸ್ಬಿಐ ಬ್ಯಾಂಕ್ನಲ್ಲಿ ಖಾತೆ ತೆರೆದಿದ್ದು ಈ ಖಾತೆಯನ್ನು ವಿವೇಕ್ದಾಸ್ ಎಂಬವರು ಆಪರೇಟ್ ಮಾಡಿ ಸದರಿ ಖಾತೆಗೆ ಹ್ಯುಮೆನ್ ಟ್ರಾಫಿಕಿಂಗ್ ಮತ್ತು ಮನಿ ಲ್ಯಾಡ್ರಿಂಗ್ ಮುಖಾಂತರ ಹಣ ವರ್ಗಾವಣೆ ಮಾಡಿರುತ್ತಾರೆ. ಖಾತೆ ನಿಮ್ಮ ಹೆಸರಿನಲ್ಲಿ ಇರುವುದರಿಂದ ನಿಮ್ಮ ಎಲ್ಲ ಅಕೌಂಟ್ ಪರಿಶೀಲನೆ ಮಾಡಬೇಕಾಗಿದೆ ಎಂದು ನಂಬಿಸಿದ್ದಾನೆ.
ಬಂಧಿಸುವುದಾಗಿ ಬೆದರಿಕೆ
ತದನಂತರ ಮೋಹನ್ ಕುಮಾರ್ ಪೊಲೀಸ್ ಅಧಿಕಾರಿ ಎಂಬುದಾಗಿ ಹೇಳಿಕೊಂಡು ವಿದ್ಯಾ ಅವರಿಗೆ ಕರೆ ಮಾಡಿ ನೀವು ಕೂಡ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುವಿರಿ, ಎಲ್ಲಿಗೂ ಹೋಗುವಂತಿಲ್ಲ, ಎಲ್ಲಿಗೆ ಹೋಗುವುದಿದ್ದರೂ ನಮಗೆ ತಿಳಿಸಬೇಕು ಎಂದು ಬೆದರಿಸಿ ನಿಮ್ಮ ಎಲ್ಲ ಅಕೌಂಟ್ ಸೀಜ್ ಆಗುತ್ತದೆ. ಆದ್ದರಿಂದ ನಿಮ್ಮ ಅಕೌಂಟ್ನಲ್ಲಿರುವ ಎಲ್ಲ ಹಣವನ್ನು ನಾನು ಹೇಳಿದ ಯುಪಿಐ ನಂಬರಿಗೆ ಹಾಗೂ ಬ್ಯಾಂಕ್ ಖಾತೆಗೆ ಕಳುಹಿಸಿ ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ವಿದ್ಯಾ ಅ. 16ರಿಂದ ನ. 7ರ ವರೆಗೆ ಹಂತ ಹಂತವಾಗಿ 19,71,679 ರೂ.ಗಳನ್ನು ವರ್ಗಾಯಿಸಿ, ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ. ಘಟನೆ ಸಂಬಂಧ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…