ಉಡುಪಿ: ನಿವೃತ್ತ ಪೊಲೀಸರಿಗೆ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನ ಲಭಿಸುವಂತೆ ಆಗಬೇಕು ಎಂದು ಸಶಸ್ತ್ರ ಮೀಸಲು ಪಡೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಎ ಚಂದ್ರ ಶೇಖರ್ ಅವರು ಆಗ್ರಹಿಸಿದರು.
ಅವರು ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.
ನಿವೃತ್ತ ಪೊಲೀಸರಿಗೆ ಆರೋಗ್ಯ ಭಾಗ್ಯ ಯೋಜನೆಯಲ್ಲಿ ಕೆಲವೊಂದು ನಿಗದಿತ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆ ದೊರೆಯುತ್ತಿದ್ದು ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬೇಕು ಎಂದಲ್ಲಿ ಅದು ಸಾಧ್ಯವಾಗುವುದಿಲ್ಲ ಈ ನಿಟ್ಟಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು ಗಮನ ಹರಿಸುವಂತೆ ಮನವಿ ಮಾಡಿದರು. ಪೊಲೀಸರು ಸದಾ ಕೆಲಸದಲ್ಲಿಯೇ ಇದ್ದು ಅವರಿಗೆ ಸಮಾಜದಲ್ಲಿ ಹೆಚ್ಚಿನ ಜವಾಬ್ದಾರಿ ಇದ್ದು ಒತ್ತಡದ ಸಮಯದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು.
ರಮೇಶ್ ಜಾರಕಿಹೊಳಿ ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ : ಜಗದೀಶ್ ಶೆಟ್ಟರ್ -Vishwanews24
ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ಪ್ರಸ್ತಾವನೆ ಮಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಮಾತನಾಡಿ ಪೊಲೀಸ್ ಕಲ್ಯಾಣ ನಿಧಿಯ ಮೂಲಕ ನಿವೃತ್ತ ಪೊಲೀಸ್ ಅಧಿಕಾರಿಗಳ ಆರೋಗ್ಯಕ್ಕೆ ಸಹಾಯ ಮಾಡುತ್ತ ಬಂದಿದ್ದು 2020-21 ನೇ ಸಾಲಿನಲ್ಲಿ ಒಟ್ಟು ರೂ. 4,64,000 ಹಣವನ್ನು ವ್ಯಯಿಸಲಾಗಿದೆ ಎಂದರು.
ಇದೇ ವೇಳೆ ಜಿಲ್ಲೆಯಲ್ಲಿ ಕೋವಿಡ್ ಸಮಸ್ಯೆ ಕಡಿಮೆಯಾಗಿದೆ ಎಂದು ನಿರ್ಲಕ್ಷ ವಹಿಸದೆ ಪ್ರತಿಯೊಬ್ಬ ಅಧಿಕಾರಿಗಳು ಮತ್ತು ನಿವೃತ್ತ ಪೊಲೀಸರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆಯುವಂತೆ ಮನವಿ ಮಾಡಿದರು.
ಬಿಸಿ ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಆರೋಗ್ಯಾಧಿಕಾರಿ ಅಮಾನತು -Vishwanews24
ಇದೇ ವೇಳೆ ಪೊಲೀಸ್ ಧ್ವಜವನ್ನು ಬಿಡುಗಡೆ ಮಾಡಿ ಬಳಿಕ ಮಾರಾಟ ಮಾಡಲಾಯಿತು. 7 ಪೊಲೀಸ್ ತಂಡಗಳು ಆಕರ್ಷಕ ಪಥ ಸಂಚಲನ ನಡೆಸಿ ಎಲ್ಲರ ಗಮನ ಸೆಳೆದವು. ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಯವರಿಗೆ ಕಲ್ಯಾಣ ನಿಧಿಯ ಚೆಕ್ಕನ್ನು ಈ ವೇಳೆ ವಿತರಿಸಲಾಯಿತು.
ಕಾರ್ಯಕ್ರಮಲ್ಲಿ ಉಡುಪಿ ಡಿವೈಎಸ್ಪಿ ಸದಾನಂದ ನಾಯಕ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಕಾರ್ಕಳ ಡಿವೈಎಸ್ಪಿ ಭರತ್ ರೆಡ್ಡಿ, ಡಿಎಆರ್ ಡಿವೈಎಸ್ಪಿ ರಾಘವೇಂದ್ರ, ನಿವೃತ್ತ ಪೊಲೀಸ್ ಅಧಿಕಾರಗಳ ಸಂಘದ ಡಾ. ಪ್ರಭುದೇವ ಮಾನೆ ಹಾಗೂ ಇತರ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ, ಉಪಸ್ಥಿತರಿದ್ದರು.
ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ಅವರು ವಂದಿಸಿ, ಉಡುಪಿ ವೃತ್ತ ನಿರೀಕ್ಷರಾದ ಮಂಜುನಾಥ್ ಅವರು ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…