Featured

ಉಡುಪಿ : ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು :  ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಉಡುಪಿ: ಪೊಲೀಸ್ ಕಾನ್ಸ್ಟೇಬಲ್ ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ..

ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು :  ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಉಡುಪಿ: ಕರ್ತವ್ಯದ್ಲಲಿ ಶೇಷ್ಠತೆಯನ್ನು ಕಂಡುಕೊಳ್ಳುವ ಮೂಲಕ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಅವರು ಬುಧವಾರ ನಗರದ ಚಂದು ಮೈದಾನದಲ್ಲಿ 12ನೇ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು. ಸೇವೆಗೆ ಸೇರಿದ ಮೇಲೆ ಹಿಂದೆ ಇದ್ದ ಮನೋವೃತ್ತಿಯನ್ನು ಬದಲಾಯಿಸದೆ ಜನರ ನೋವಿಗೆ ದನಿಯಾಗುವಂತೆ ಅವರು ಕರೆ ನೀಡಿದರು.

 

ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ವರದಿ ವಾಚಿಸಿ ಒಳಾಂಗಣ ವಿಷಯಕ್ಕೆ ಸಂಬಂಧಿಸಿದಂತೆ ಈ ಘಟಕದಲ್ಲಿರುವ ಅಧಿಕಾರಿಗಳೊಗೊಂಡಂತೆ ಹೊರಗಿನ ಅತಿಥಿ ಉಪನ್ಯಾಸಕರನ್ನು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿಕೊಂಡು ಬೋಧನೆ ನೀಡಲಾಗಿದೆ. ಹೊರಾಂಗಣ ವಿಷಯಗಳಿಗೆ ಸಂಬಂಧಿಸಿದಂತೆ ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಯೋಗ, ಧ್ಯಾನ, ಕರಾಟೆ, ಶಾರೀರಿಕ ವ್ಯಾಯಾಮ, ಒನ್ ಮಿನಿಟ್ ಡ್ರಿಲ್, ರೋಡ್ ವಾಕ್ ಅಂಡ್ ರನ್, ಅಡೆತಡೆಗಳ ಜಿಗಿತ, ಅಯುಧಗಲ ಜೊತೆ ಕವಾಯತು, ಅಯುಧಗಳ ಇಲ್ಲದೆ ಮಾಡುವ ಕವಾಯತು, ಫೈರಿಂಗ್ ಅಭ್ಯಾಸ, ಕ್ರೌಡ್ ಕಂಟೋಲ್, ಫೈರಿಂಗ್ ಹಾಗೂ ಅಶ್ರುವಾಯುಗಳ ಬಗ್ಗೆ ಬೋಧನೆ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಮನೋರಂಜನೆ ಮತ್ತು ಮನೋವಿಕಾಸಕ್ಕಾಗಿ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ತರಬೇತಿ ಬಿಡುವಿನ ಸಮಯದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಸ್ವಾಗತಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಕಾರ್ಕಳ ಉಪ ವಿಭಾಗದ ಅಧಿಕ್ಷಕರಾದ ಭರತ್ ರೆಡ್ಡಿ ವಂದಿಸಿದರು. ಡಿ ಎ ಆರ್ ಡಿವೈಎಸ್ಪಿ ರಾಘವೇಂದ್ರ ಪ್ರಮಾಣ ವಚನ ಭೋದಿಸಿದರು, ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಪರೇಡ್ ಕಮಾಂಡರ್ ಸಂತೋಷ್ ಕಪ್ಪಲಗುದ್ದಿ ನೇತೃತ್ವದಲ್ಲಿ ನಿರ್ಗಮನ ಪಥಸಂಚಲನ ಆಕರ್ಷಕವಾಗಿ ಮೂಡಿಬಂದಿತು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

30 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

40 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

59 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago