Featured

ಉಡುಪಿ : ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು :  ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಉಡುಪಿ: ಪೊಲೀಸ್ ಕಾನ್ಸ್ಟೇಬಲ್ ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ..

ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು :  ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಉಡುಪಿ: ಕರ್ತವ್ಯದ್ಲಲಿ ಶೇಷ್ಠತೆಯನ್ನು ಕಂಡುಕೊಳ್ಳುವ ಮೂಲಕ ಅಧಿಕಾರವನ್ನು ಸಮರ್ಥವಾಗಿ ಬಳಸಿಕೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದರು.

ಅವರು ಬುಧವಾರ ನಗರದ ಚಂದು ಮೈದಾನದಲ್ಲಿ 12ನೇ ಪೊಲೀಸ್ ಕಾನ್ಸ್ಟೆಬಲ್ಗಳ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಪೊಲೀಸ್ ಸೇವೆ ಎನ್ನುವುದು ಒಂದು ಅತ್ಯುನ್ನತ ಸೇವೆಯಾಗಿದ್ದು ರಾಷ್ಟ್ರ ಕಟ್ಟುವ ಕಾಯಕದಲ್ಲಿ ಕೈಜೋಡಿಸುವ ಪೊಲೀಸರಿಗೆ ಅಭಿನಂದನೆಗಳು. ಸೇವೆಗೆ ಸೇರಿದ ಮೇಲೆ ಹಿಂದೆ ಇದ್ದ ಮನೋವೃತ್ತಿಯನ್ನು ಬದಲಾಯಿಸದೆ ಜನರ ನೋವಿಗೆ ದನಿಯಾಗುವಂತೆ ಅವರು ಕರೆ ನೀಡಿದರು.

 

ಪೊಲೀಸ್ ತರಬೇತಿ ಶಾಲೆಯ ಪ್ರಾಂಶುಪಾಲ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ವರದಿ ವಾಚಿಸಿ ಒಳಾಂಗಣ ವಿಷಯಕ್ಕೆ ಸಂಬಂಧಿಸಿದಂತೆ ಈ ಘಟಕದಲ್ಲಿರುವ ಅಧಿಕಾರಿಗಳೊಗೊಂಡಂತೆ ಹೊರಗಿನ ಅತಿಥಿ ಉಪನ್ಯಾಸಕರನ್ನು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿಕೊಂಡು ಬೋಧನೆ ನೀಡಲಾಗಿದೆ. ಹೊರಾಂಗಣ ವಿಷಯಗಳಿಗೆ ಸಂಬಂಧಿಸಿದಂತೆ ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಯೋಗ, ಧ್ಯಾನ, ಕರಾಟೆ, ಶಾರೀರಿಕ ವ್ಯಾಯಾಮ, ಒನ್ ಮಿನಿಟ್ ಡ್ರಿಲ್, ರೋಡ್ ವಾಕ್ ಅಂಡ್ ರನ್, ಅಡೆತಡೆಗಳ ಜಿಗಿತ, ಅಯುಧಗಲ ಜೊತೆ ಕವಾಯತು, ಅಯುಧಗಳ ಇಲ್ಲದೆ ಮಾಡುವ ಕವಾಯತು, ಫೈರಿಂಗ್ ಅಭ್ಯಾಸ, ಕ್ರೌಡ್ ಕಂಟೋಲ್, ಫೈರಿಂಗ್ ಹಾಗೂ ಅಶ್ರುವಾಯುಗಳ ಬಗ್ಗೆ ಬೋಧನೆ ಮತ್ತು ಪ್ರಾಯೋಗಿಕ ತರಬೇತಿ ನೀಡಲಾಗಿದೆ. ಪ್ರಶಿಕ್ಷಣಾರ್ಥಿಗಳಿಗೆ ಮನೋರಂಜನೆ ಮತ್ತು ಮನೋವಿಕಾಸಕ್ಕಾಗಿ ಹಲವು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ತರಬೇತಿ ಬಿಡುವಿನ ಸಮಯದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಸ್ವಾಗತಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

ಕಾರ್ಕಳ ಉಪ ವಿಭಾಗದ ಅಧಿಕ್ಷಕರಾದ ಭರತ್ ರೆಡ್ಡಿ ವಂದಿಸಿದರು. ಡಿ ಎ ಆರ್ ಡಿವೈಎಸ್ಪಿ ರಾಘವೇಂದ್ರ ಪ್ರಮಾಣ ವಚನ ಭೋದಿಸಿದರು, ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಪರೇಡ್ ಕಮಾಂಡರ್ ಸಂತೋಷ್ ಕಪ್ಪಲಗುದ್ದಿ ನೇತೃತ್ವದಲ್ಲಿ ನಿರ್ಗಮನ ಪಥಸಂಚಲನ ಆಕರ್ಷಕವಾಗಿ ಮೂಡಿಬಂದಿತು.

Vishwa News 24

Recent Posts

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

15 minutes ago

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ – vishwanews24

ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…

25 minutes ago

ಮಂಗಳೂರು: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ – vishwanews24

ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…

36 minutes ago

ಇನ್ಮುಂದೆ ವೈದ್ಯರ ಶಿಫಾರಸು ಇಲ್ಲದೇ ಮೆಡಿಕಲ್‌ನಲ್ಲಿ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ : ಕೇಂದ್ರ ಆದೇಶ – vishwanews24

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…

47 minutes ago

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ – vishwanews24

ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…

57 minutes ago

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

20 hours ago