Featured

ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24

ಉಡುಪಿ : ಪೋಷಣ್ ಅಭಿಯಾನ ಯೋಜನೆಯಿಂದ ಅಪೌಷ್ಟಿಕತೆ ದೂರ : ಸಿಇಓ ಡಾ.ನವೀನ್ ಭಟ್ -Vishwanews24

ಉಡುಪಿ: ಅಂಗನವಾಡಿ ಕೇಂದ್ರಗಳಲ್ಲಿ ಗುರುತಿಸಲ್ಪಟ್ಟ ತೀವ್ರ ಅಪೌಷ್ಠಿಕ ಹಾಗೂ ಸಾಧಾರಣ ಅಪೌಷ್ಠಿಕ ಮಕ್ಕಳನ್ನು ಪಂಚಾಯತ್ ಮಟ್ಟದಲ್ಲಿ ದತ್ತು ಪಡೆದು ಅವರ ಪೌಷ್ಠಿಕತೆ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕರಿಸಿದಾಗ ಪೋಷಣ್ ಅಭಿಯಾನ ಯೋಜನೆಯ ಮುಖ್ಯ ಉದ್ದೇಶವಾದ ಅಪೌಷ್ಠಿಕತೆಯನ್ನು ಹೋಗಲಾಡಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಹೇಳಿದರು.

ಅವರು ಬುಧವಾರ, ಬಡಗಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಅಭಿಯಾನ್ ಯೋಜನೆಯ ಪೋಷಣ್ ಪಕ್ವಾಡ ಕಾರ್ಯಕ್ರಮ ಉದ್ಘಾಟಿಸಿ, ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದರು.

ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ದುಡಿಯೋಣ ಬಾ ಅಭಿಯಾನ: ದಿನಕರ ಬಾಬು -Vishwanews24

ಸರಕಾರ ಮಕ್ಕಳಲ್ಲಿ ಪೌಷ್ಟಿಕಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಂಗನವಾಡಿಗಳ ಮೂಲಕ ತಲುಪಿಸುತ್ತಿದೆ. ಇದು ಪ್ರತಿಶತಃ 100 ರಷ್ಟು ಅನುಷ್ಟಾನವಾದಾಗ ಅಪೌಷ್ಟಿಕತೆಯನ್ನು ದೂರ ಮಾಡಲು ಸಾಧ್ಯವಾಗುತ್ತದೆ ಎಂದರು.      ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಪೌಷ್ಠಿಕ ಕೈತೋಟಗಳನ್ನು ಅಭಿವೃದ್ಧಿ ಪಡಿಸುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್ ಶೇಷಪ್ಪ, ಬಡಗಬೆಟ್ಟು ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷೆ ನಿರುಪಮಾ ಎಸ್ ಹೆಗ್ಡೆ, ಎನ್.ಆರ್.ಎಲ್.ಎಮ್ ಯೋಜನಾ ನಿರ್ದೇಶಕ ಬಾಬು, ಎನ್.ಆರ್.ಎಲ್.ಎಮ್ ಉಪ ಯೋಜನಾ ನಿರ್ದೇಶಕ ಗುರುದತ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಕೇಶವ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಇದನ್ನೂ ಓದಿ : ಉಡುಪಿ : ಸ್ವಚ್ಛತೆಯಲ್ಲಿ ಜಿಲ್ಲೆಯು ಅಗ್ರಸ್ಥಾನ ಕಾಯ್ದುಕೊಳ್ಳಲು ವಿದ್ಯಾರ್ಥಿಗಳ ಶ್ರಮ ಅಗತ್ಯ : ಜಿ.ಪಂ. ಅಧ್ಯಕ್ಷ ದಿನಕರ ಬಾಬು -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

11 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

12 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago