ಉಡುಪಿ : ಅಪೌಷ್ಠಿಕತೆಯು ಮಕ್ಕಳು, ಗರ್ಭಿಣಿ, ಬಾಣಂತಿ, ಕಿಶೋರಾವಸ್ಥೆಯಲ್ಲಿ ಕಂಡು ಬರುತ್ತಿದ್ದು, ಈ ಅಪೌಷ್ಠಿಕತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ತಂದಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರವನ್ನು ನೀಡುತ್ತಿವೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಳ್ಕರ್ ತಿಳಿಸಿದರು.
ಅವರು ಇಂದು, ಹಿರಿಯಡ್ಕ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗದ ಚಂದಯ್ಯ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಯುಷ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗ ಹಿರಿಯಡ್ಕ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಕಿಶೋರಿಯರು ಭವಿಷ್ಯದ ಉತ್ತಮ ಸಧೃಢ ತಾಯಂದಿರಾಗಲು ಹಾಗೂ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಠಿಕ ಆಹಾರದ ಸೇವನೆಯೊಂದಿಗೆ ಉತ್ತಮ ಆರೋಗ್ಯಕರ ಅಭ್ಯಾಸಗಳಾದ ವ್ಯಾಯಾಮ, ಯೋಗ, ಧ್ಯಾನ ಬಹಳ ಅಗತ್ಯ ಎಂದು ತಿಳಿಸಿದರು. ಆಯುಷ್ ಇಲಾಖೆಯ ಅಧಿಕಾರಿ ಡಾ.ಅಲಕಾನಂದ ರಾವ್ ಮಾತನಾಡಿ, ಆಯುಷ್ ಅರಿವು ಹಾಗೂ ಯೋಗಾಸನ ಕಾರ್ಯಕ್ರಮವು ಮುಖ್ಯವಾಗಿ ಹದಿಹರೆಯದವರಿಗಾಗಿ ಆಯೋಜಿಸಿದ್ದು, ಹಸಿವಾದಾಗ ಜಂಕ್ ಆಹಾರವನ್ನು ಸೇವಿಸುವ ಬದಲು ಸ್ಥಳೀಯ ಲಭ್ಯ ಪೋಷಕಾಂಶಯುಕ್ತ ಆಹಾರ, ಋತುಮಾನಕ್ಕೆ ತಕ್ಕಂತ ಆಹಾರವನ್ನು ಸೇವಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಮಾತನಾಡಿ, ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವು ಒಂದು ಉತ್ತಮ ಕಾರ್ಯಕ್ರಮವಾಗಿದ್ದು, ಅದರ ಸದುಪಯೋಗವನ್ನು ಎಲ್ಲಾ ಕಿಶೋರಿಯರು ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ನಾಯಕ್ ಹಾಗೂ ಡಾ. ಶಿಲ್ಪ, ಕೆ.ಪಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಶಾರದಾ, ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಳಿನಾ ದೇವಿ ಎಮ್ ಆರ್,
ಶಾಲೆಯ ಭೋದಕ ವರ್ಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ನಿರೂಪಿಸಿ, ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…