ಉಡುಪಿ : ಅಪೌಷ್ಠಿಕತೆಯು ಮಕ್ಕಳು, ಗರ್ಭಿಣಿ, ಬಾಣಂತಿ, ಕಿಶೋರಾವಸ್ಥೆಯಲ್ಲಿ ಕಂಡು ಬರುತ್ತಿದ್ದು, ಈ ಅಪೌಷ್ಠಿಕತೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಭಾರತ ಸರ್ಕಾರವು ಹಲವು ಯೋಜನೆಗಳನ್ನು ತಂದಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರವನ್ನು ನೀಡುತ್ತಿವೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಚಂದ್ರಿಕಾ ಕೇಳ್ಕರ್ ತಿಳಿಸಿದರು.
ಅವರು ಇಂದು, ಹಿರಿಯಡ್ಕ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗದ ಚಂದಯ್ಯ ಹೆಗ್ಡೆ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಯುಷ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಉಡುಪಿ ಹಾಗೂ ಕೆ.ಪಿ.ಎಸ್. ಪ್ರೌಢಶಾಲಾ ವಿಭಾಗ ಹಿರಿಯಡ್ಕ ಇವರ ಸಹಯೋಗದೊಂದಿಗೆ ನಡೆದ ಪೋಷಣ್ ಪಕ್ವಾಡ ಅಭಿಯಾನ್ ಯೋಜನೆಯ ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಂದಿನ ಕಿಶೋರಿಯರು ಭವಿಷ್ಯದ ಉತ್ತಮ ಸಧೃಢ ತಾಯಂದಿರಾಗಲು ಹಾಗೂ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಠಿಕ ಆಹಾರದ ಸೇವನೆಯೊಂದಿಗೆ ಉತ್ತಮ ಆರೋಗ್ಯಕರ ಅಭ್ಯಾಸಗಳಾದ ವ್ಯಾಯಾಮ, ಯೋಗ, ಧ್ಯಾನ ಬಹಳ ಅಗತ್ಯ ಎಂದು ತಿಳಿಸಿದರು. ಆಯುಷ್ ಇಲಾಖೆಯ ಅಧಿಕಾರಿ ಡಾ.ಅಲಕಾನಂದ ರಾವ್ ಮಾತನಾಡಿ, ಆಯುಷ್ ಅರಿವು ಹಾಗೂ ಯೋಗಾಸನ ಕಾರ್ಯಕ್ರಮವು ಮುಖ್ಯವಾಗಿ ಹದಿಹರೆಯದವರಿಗಾಗಿ ಆಯೋಜಿಸಿದ್ದು, ಹಸಿವಾದಾಗ ಜಂಕ್ ಆಹಾರವನ್ನು ಸೇವಿಸುವ ಬದಲು ಸ್ಥಳೀಯ ಲಭ್ಯ ಪೋಷಕಾಂಶಯುಕ್ತ ಆಹಾರ, ಋತುಮಾನಕ್ಕೆ ತಕ್ಕಂತ ಆಹಾರವನ್ನು ಸೇವಿಸುವಂತೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಅಧ್ಯಕ್ಷೆ ಸಂಧ್ಯಾ ಕಾಮತ್ ಮಾತನಾಡಿ, ಯೋಗಾಸನ ಮಾರ್ಗದರ್ಶನ ಶಿಬಿರ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಿಕೆ ಆಯುಷ್-ಅರಿವು ಕಾರ್ಯಕ್ರಮವು ಒಂದು ಉತ್ತಮ ಕಾರ್ಯಕ್ರಮವಾಗಿದ್ದು, ಅದರ ಸದುಪಯೋಗವನ್ನು ಎಲ್ಲಾ ಕಿಶೋರಿಯರು ಪಡೆದುಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ.ಪ್ರಕಾಶ್ ನಾಯಕ್ ಹಾಗೂ ಡಾ. ಶಿಲ್ಪ, ಕೆ.ಪಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಶಾರದಾ, ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಳಿನಾ ದೇವಿ ಎಮ್ ಆರ್,
ಶಾಲೆಯ ಭೋದಕ ವರ್ಗದವರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು, ಹಿರಿಯ ಮೇಲ್ವಿಚಾರಕಿ ಶಾಂತಿ ಪ್ರಭು ನಿರೂಪಿಸಿ, ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…